Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:35 - ಪರಿಶುದ್ದ ಬೈಬಲ್‌

35 ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆಜು ಸಗ್ಳ್ಯಾ ಶಾರಾತ್ನಿ ಅನಿ ಗಾಂವಾತ್ನಿ ಗೆಲೊ, ಸಿನಾಗೊಗಾತ್ನಿ ತೆನಿ ಶಿಕ್ವುಲ್ಯಾನ್ ಅನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗ್ಲ್ಯಾನ್, ಅನಿ ಸಗ್ಳ್ಯಾ ಸಿಕ್ ಲೊಕಾಕ್ನಿ, ಅನಿ ದುಕ್ನಿಲಾಗಲ್ಲ್ಯಾಕ್ನಿ ಅರಾಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:35
12 ತಿಳಿವುಗಳ ಹೋಲಿಕೆ  

ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.


ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.


ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ.


ಯೇಸು ಪ್ರತಿಯೊಂದು ಊರಿನಲ್ಲಿಯೂ ಹಳ್ಳಿಯಲ್ಲಿಯೂ ಉಪದೇಶಿಸುತ್ತಾ ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು.


“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.


ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.


ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು