Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:37 - ಪರಿಶುದ್ದ ಬೈಬಲ್‌

37 ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಗ ತನ್ನ ಶಿಷ್ಯರಿಗೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತಸೆಮನುನ್, ತೆನಿ ಅಪ್ನಾಚ್ಯಾ ಶಿಸಾಕ್ನಿ, ಪಾಜೆ ತವ್ಡೆ ಪಿಕ್ಕ್ ಯೆಲಾ, ಖರೆ ಕಾಮ್ ಕರ್‍ತಲಿ ಲೊಕಾ ಲೈ ಕಮಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:37
17 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.


ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು. ಈ ದರ್ಶನದಲ್ಲಿ ಮಕೆದೋನಿಯದ ನಾಡಿನಿಂದ ಬಂದ ಒಬ್ಬ ಮನುಷ್ಯನು ಅಲ್ಲಿ ನಿಂತುಕೊಂಡು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡು” ಎಂದು ಬೇಡಿಕೊಂಡನು.


ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ದೇವರು ಆಜ್ಞಾಪಿಸಲು ಅನೇಕರು ಈ ಸುವಾರ್ತೆಯನ್ನು ಸಾರಲು ಹೋದರು:


ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.


ಯೇಸುವು (ಯುಸ್ತನೆಂದೂ ಅವನನ್ನು ಕರೆಯುತ್ತಾರೆ.) ಸಹ ವಂದನೆಯನ್ನು ಹೇಳುತ್ತಾನೆ. ಯೆಹೂದ್ಯರಲ್ಲಿ ವಿಶ್ವಾಸಿಗಳಾಗಿರುವ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಇವರೇ ನನಗೆ ಆದರಣೆಯಾಗಿದ್ದಾರೆ.


ನಾನು ನಿನ್ನೊಂದಿಗಿದ್ದೇನೆ. ನಿನಗೆ ಕೇಡುಮಾಡಲು ಯಾರಿಗೂ ಸಾಧ್ಯವಿಲ್ಲ. ನನ್ನ ಅನೇಕ ಜನರು ಈ ಪಟ್ಟಣದಲ್ಲಿ ಇದ್ದಾರೆ” ಎಂದು ಹೇಳಿದನು.


ಬೆಳೆಯ ಯಜಮಾನ ದೇವರೇ. ಆದ್ದರಿಂದ ಹೆಚ್ಚು ಕೆಲಸಗಾರರನ್ನು ಸುಗ್ಗಿಗಾಗಿ ಕಳುಹಿಸಿಕೊಡುವಂತೆ ಆತನಿಗೆ ಪ್ರಾರ್ಥನೆ ಮಾಡಿರಿ” ಎಂದು ಹೇಳಿದನು.


“ಪರಲೋಕರಾಜ್ಯವು ಒಬ್ಬ ದ್ರಾಕ್ಷಿತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಒಂದು ಮುಂಜಾನೆ ಅವನು ತನ್ನ ತೋಟದಲ್ಲಿ ಕೆಲಸ ಮಾಡಲು ಬೇರೆ ಕೂಲಿಯಾಳುಗಳನ್ನು ಕರೆಯುವುದಕ್ಕೆ ಹೊರಟನು.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು