Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:8 - ಪರಿಶುದ್ದ ಬೈಬಲ್‌

8 ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:8
10 ತಿಳಿವುಗಳ ಹೋಲಿಕೆ  

“ಆದರೆ ಆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ, ಕುರುಡಾಗಿದ್ದರೆ ಅಥವಾ ಬೇರೆ ಯಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”


ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.


ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:


“ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು