Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:12 - ಪರಿಶುದ್ದ ಬೈಬಲ್‌

12 ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಂಥ ಕೆಲಸವನ್ನು ನಡಿಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಾಲಿ ಉತ್ತರ ಕೊಡುವವರಾಗಾಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರ ಯೆಹೋವನಿಗೆ ನೈವೇದ್ಯ ತಂದರ್ಪಿಸುವವನನ್ನೂ ಕಡಿದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:12
28 ತಿಳಿವುಗಳ ಹೋಲಿಕೆ  

ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೆಹೋವನು ಯೆಹೂದದ ಜನರನ್ನು ಮೊದಲು ರಕ್ಷಿಸುವನು. ಆಗ ಜೆರುಸಲೇಮಿನ ನಿವಾಸಿಗಳು ತಮ್ಮನ್ನು ಹೆಚ್ಚಿಸಿಕೊಳ್ಳುವದಿಲ್ಲ. ಜೆರುಸಲೇಮಿನಲ್ಲಿ ವಾಸಿಸುವ ದಾವೀದನ ಸಂತತಿಯವರೂ ಇತರರೂ ತಾವು ಯೆಹೂದ ಪ್ರಾಂತ್ಯದಲ್ಲಿ ವಾಸಿಸುವ ಜನರಿಗಿಂತ ಉತ್ತಮರು ಎಂದು ಹೆಚ್ಚಳಪಡುವದಿಲ್ಲ.


ನೀವು ಸರ್ವಾಂಗಹೋಮವನ್ನಾಗಲಿ ಧಾನ್ಯದ ಹೋಮವನ್ನಾಗಲಿ ಅರ್ಪಿಸಿದರೆ ನಾನು ಅದನ್ನು ಸ್ವೀಕರಿಸುವುದಿಲ್ಲ. ಸಮಾಧಾನಯಜ್ಞದಲ್ಲಿ ಕೊಬ್ಬಿದ ಪ್ರಾಣಿಗಳನ್ನು ಬಲಿಯರ್ಪಿಸಿದರೂ ನಾನು ಅದನ್ನು ಕಣ್ಣೆತ್ತಿ ನೋಡುವದಿಲ್ಲ.


ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.


ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.


ಆದಕಾರಣವೇ, ಏಲಿಯ ಕುಟುಂಬವು ಅರ್ಪಿಸುವ ಯಜ್ಞವಾಗಲಿ ಧಾನ್ಯನೈವೇದ್ಯವಾಗಲಿ ಅವರ ಪಾಪಗಳಿಗೆ ಪ್ರಾಯಶ್ಚಿತ್ತವಾಗುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


“ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!


ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು