Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:3 - ಪರಿಶುದ್ದ ಬೈಬಲ್‌

3 “ನಿಮ್ಮ ಸಂತತಿಯವರನ್ನು ನಾನು ಶಿಕ್ಷಿಸುವೆನು. ಹಬ್ಬದ ದಿವಸಗಳಲ್ಲಿ ಯಾಜಕರೇ, ನೀವು ನನಗೆ ಯಜ್ಞಗಳನ್ನರ್ಪಿಸುತ್ತೀರಿ. ಪಶುವನ್ನು ಕೊಯಿದ ಬಳಿಕ ಅದರ ಒಳಗಿನ ಭಾಗಗಳನ್ನೂ ಅದರ ಮಲವನ್ನು ನಿಮ್ಮ ಮುಖಗಳಿಗೆ ಹಚ್ಚುವೆನು ಮತ್ತು ನೀವು ಅದರೊಂದಿಗೆ ಹೊರಗೆ ಬಿಸಾಡಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ನಿಮ್ಮ ಬೀಜವನ್ನು [ಬೆಳೆಯದಂತೆ]ಖಂಡಿಸುವೆನು; ನಿಮ್ಮ ಮುಖದ ಮೇಲೆ ಮಲವನ್ನು, ನಿಮ್ಮ ಹಬ್ಬದ ಪಶುಗಳ ಮಲವನ್ನು ಚೆಲ್ಲಿಬಿಡುವೆನು; ನೀವು ಆ ಮಲದ ತಿಪ್ಪೆಯ ಪಾಲಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:3
16 ತಿಳಿವುಗಳ ಹೋಲಿಕೆ  

ನಿನ್ನ ಮೇಲೆ ಹೊಲಸನ್ನು ಬಿಸಾಡುವೆನು. ನಿನ್ನನ್ನು ದ್ವೇಷದಿಂದ ಕಾಣುವೆನು. ಜನರು ನಿನ್ನನ್ನು ನೋಡಿ ನಗಾಡುವರು.


“ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖದಾಕ್ಷಿಣ್ಯ ಮಾಡುತ್ತೀರಿ. ಈ ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.”


ನಾವು ಬೀಜ ಬಿತ್ತಿದೆವು. ಆದರೆ ಅವು ಒಣಗಿ, ಸತ್ತು ಈಗ ನೆಲದ ಮೇಲೆ ಬಿದ್ದಿವೆ. ನಮ್ಮ ಗಿಡಗಳೆಲ್ಲಾ ಒಣಗಿ ಸತ್ತಿವೆ. ನಮ್ಮ ಉಗ್ರಾಣವು ಬರಿದಾಗಿದ್ದು ಬೀಳುತ್ತಲಿದೆ.


ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಕಸವನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.


ಬಳಿಕ ಹೋರಿಯ ಮಾಂಸ, ಚರ್ಮ, ಇತರ ಭಾಗಗಳನ್ನು ತೆಗೆದುಕೊಂಡು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಟ್ಟುಬಿಡು. ಇದು ಯಾಜಕರ ಪಾಪಗಳನ್ನು ಪರಿಹರಿಸುವ ಕಾಣಿಕೆಯಾಗಿದೆ.


ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ.


ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ನೀನು ಅವರನ್ನು ಎಂದೋರಿನಲ್ಲಿ ಸೋಲಿಸಿದೆ. ಅವರ ದೇಹಗಳು ನೆಲದ ಮೇಲೆ ಕೊಳೆತುಹೋದವು.


ಆದರೆ ಅವನು ತನ್ನ ಮಲದ ಹಾಗೆ ನಿತ್ಯನಾಶವಾಗುವನು. ಅವನನ್ನು ಬಲ್ಲವರು, ‘ಅವನೆಲ್ಲಿ?’ ಎಂದು ಕೇಳುವರು.


ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!


“ಹೊಲದಲ್ಲಿ ಧಾನ್ಯ ಯಥೇಚ್ಛವಾಗಿ ಬೆಳೆದರೂ ನೀವು ಮನೆಯೊಳಗೆ ತರುವುದು ಸ್ವಲ್ಪ ಮಾತ್ರ. ಮಿಡತೆಯು ನಿಮ್ಮ ಬೆಳೆಯನ್ನು ತಿಂದು ಬಿಡುವದು.


ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.


ಹೊಲಗದ್ದೆಗಳೆಲ್ಲಾ ನಾಶವಾದವು. ಭೂಮಿಯೂ ಗೋಳಾಡುತ್ತಿರುವುದು. ಯಾಕೆಂದರೆ ಧಾನ್ಯವು ನಾಶವಾದವು. ಹೊಸ ದ್ರಾಕ್ಷಾರಸವು ಬತ್ತಿಹೋಯಿತು. ಎಣ್ಣೆಯು ಇಲ್ಲದೆಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು