Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:10 - ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:10
35 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.


“ಎಲ್ಲಾ ಬೆಳೆಗಳಲ್ಲಿ ಹತ್ತರಲ್ಲಿ ಒಂದಂಶವು ಯೆಹೋವನದ್ದಾಗಿರುತ್ತದೆ. ಹೊಲಗಳ ಬೆಳೆಗಳಾಗಲಿ ಮರಗಳ ಫಲಗಳಾಗಲಿ ಅದರಲ್ಲಿ ಹತ್ತರಲ್ಲಿ ಒಂದಂಶ ಯೆಹೋವನದ್ದಾಗಿರುತ್ತದೆ.


ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.


“ಲೇವಿಯರು ದೇವದರ್ಶನಗುಡಾರಕ್ಕೋಸ್ಕರ ಮಾಡುವ ಭಾರವಾದ ಕೆಲಸಕ್ಕೆ ಪ್ರತಿಫಲವಾಗಿ ಪ್ರತಿಯೊಬ್ಬ ಇಸ್ರೇಲನ ದಶಾಂಶವನ್ನು ನಾನು ಲೇವಿಯರಿಗೆ ಅವರ ಪಾಲಾಗಿ ಕೊಡುತ್ತಿದ್ದೇನೆ.


ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದವರೆಗೆ ಉಳಿಯುವಂತೆ ನಿಮಗೆ ಬೇಕಾದಷ್ಟು ದವಸಧಾನ್ಯಗಳಿರುತ್ತದೆ. ನೀವು ಹೊಸ ಬೆಳೆಯನ್ನು ಕೊಯ್ಯುವಿರಿ. ಆದರೆ ಹೊಸ ಬೆಳೆಯನ್ನು ಸಂಗ್ರಹಿಸಬೇಕಾದರೆ ಹಳೆ ಬೆಳೆಯನ್ನು ಬಿಸಾಡಬೇಕಾಗುತ್ತದೆ.


ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.


ಆದರೆ ಆ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಿಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು ಆ ಅಧಿಕಾರಿಗೆ, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದು ಹೇಳಿದ್ದನು.


ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”


ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.


ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷವಾಗಿತ್ತು.


ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲಿ ಉತ್ತರಕ್ಕಾಗಲಿ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು.


ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಾಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.


“ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಜ್ಞಾಪಕಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ.


ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.


“ಪ್ರತಿ ವರ್ಷ ನಿಮ್ಮ ಹೊಲದ ಬೆಳೆಯಲ್ಲಿ ಹತ್ತನೆಯ ಒಂದು ಅಂಶವನ್ನು ಪ್ರತ್ಯೇಕಿಸಿಡಿರಿ.


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


ಆಗ ಆತನು ಉನ್ನತದಲ್ಲಿರುವ ಮೇಘಗಳನ್ನು ತೆರೆದನು, ಅವರ ಆಹಾರಕ್ಕಾಗಿ ಮನ್ನವನ್ನು ಮಳೆಗರೆಸಿದನು.


ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.


ಎಲ್ಲಾ ಪ್ರಥಮಫಲವು ಯಾಜಕರಿಗೆ ಸಲ್ಲತಕ್ಕದ್ದು. ಅಲ್ಲದೆ ನೀವು ನಾದುವ ಮೊದಲನೆ ರೊಟ್ಟಿಯ ಹಿಟ್ಟು ಯಾಜಕರಿಗೆ ಕೊಡಬೇಕು. ಹೀಗೆ ಮಾಡಿದ್ದಲ್ಲಿ ನೀವು ಆಶೀರ್ವದಿಸಲ್ಪಡುತ್ತೀರಿ.


ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.


ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.


ಕಣಜಗಳು ಗೋದಿಯಿಂದ ತುಂಬಿರುವವು. ಪಿಪಾಯಿಗಳು ಎಣ್ಣೆಯಿಂದಲೂ ದ್ರಾಕ್ಷಾರಸದಿಂದಲೂ ತುಂಬಿತುಳುಕುವವು.


ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು