Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:11 - ಪರಿಶುದ್ದ ಬೈಬಲ್‌

11 ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:11
15 ತಿಳಿವುಗಳ ಹೋಲಿಕೆ  

ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ.


ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.


“ಈ ಜನರು ನೆಮ್ಮದಿಯಿಂದ ಭೂಮಿಯ ಮೇಲೆ ನಡೆಯುವರು. ಅವರ ದ್ರಾಕ್ಷಾಲತೆಗಳು ದ್ರಾಕ್ಷಿಹಣ್ಣನ್ನು ಕೊಡುವವು. ದೇಶವು ಸಮೃದ್ಧಿಯಾದ ಬೆಳೆಯನ್ನು ಕೊಡುವದು. ಆಕಾಶವು ಮಳೆಯನ್ನು ಸುರಿಸುವದು. ಇವೆಲ್ಲವನ್ನು ನಾನು ನನ್ನ ಜನರಿಗೆ ಕೊಡುವೆನು.


ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”


ಚೂರಿ ಮಿಡತೆ ತಿಂದುಬಿಟ್ಟಿದ್ದನ್ನು ಗುಂಪು ಮಿಡತೆ ತಿಂದಿತು. ಗುಂಪು ಮಿಡತೆ ತಿಂದುಬಿಟ್ಟದ್ದನ್ನು ಹಾರುವ ಮಿಡತೆ ತಿಂದಿತು. ಹಾರುವ ಮಿಡತೆ ತಿಂದು ಉಳಿದದ್ದನ್ನು ನಾಶಮಾಡುವ ಮಿಡತೆ ತಿಂದುಬಿಟ್ಟಿತು.


ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”


“ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ


ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.


“ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.


ಆ ಮಿಡತೆಗಳು ನನ್ನ ದ್ರಾಕ್ಷಿತೋಟದ ಹಣ್ಣುಗಳನ್ನೆಲ್ಲಾ ತಿಂದುಬಿಡುವವು. ನನ್ನ ಅಂಜೂರದ ಮರಗಳನ್ನು ನಾಶಮಾಡುವವು. ನನ್ನ ಮರಗಳ ತೊಗಟೆಗಳನ್ನು ಮಿಡತೆಗಳು ತಿಂದುಬಿಡುವವು. ಅದರ ಕೊಂಬೆಗಳು ಬಿಳುಪಾಗುವವು. ಮರಗಳು ನಾಶವಾಗುವವು.


ಆಗ ನಾನು ನಿನಗೆ ಪ್ರತಿಕ್ರಿಯೆ ತೋರ್ಪಡಿಸುವೆನು.” ಇದು ಯೆಹೋವನು ಹೇಳಿದ ಮಾತು: “ನಾನು ಆಕಾಶದೊಂದಿಗೆ ಮಾತಾಡಲು ಅದು ಭೂಮಿಯ ಮೇಲೆ ಮಳೆಗರೆಯುವದು.


“ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡತೆಗಳ ಗುಂಪು, ದೊಡ್ಡ ಮಿಡತೆ, ನಾಶಮಾಡುವ ಮಿಡತೆ, ಹಾರುವ ಮಿಡತೆ, ಚೂರಿ ಮಿಡತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ ಸುಭಿಕ್ಷ ಕಾಲವನ್ನು ದಯಪಾಲಿಸುವೆನು.


ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು