Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:17 - ಪರಿಶುದ್ದ ಬೈಬಲ್‌

17 ಯೆಹೋವನು ಹೇಳುವುದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:17
40 ತಿಳಿವುಗಳ ಹೋಲಿಕೆ  

ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


“ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.”


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.


ಇದಾದ ಬಳಿಕ ತಮ್ಮನ್ನು ಶುದ್ಧಪಡಿಸಿಕೊಳ್ಳಲು ಲೇವಿಯರಿಗೆ ಆಜ್ಞಾಪಿಸಿದೆನು. ಅವರು ಶುದ್ಧಪಡಿಸಿಕೊಂಡ ಬಳಿಕ ಬಾಗಿಲುಗಳನ್ನು ಕಾಯಲು ಅವರನ್ನು ಕಳುಹಿಸಿದೆನು. ಯಾಕೆಂದರೆ ಸಬ್ಬತ್‌ದಿನವು ಪವಿತ್ರ ದಿನವೆಂದು ಎಲ್ಲರೂ ಆಚರಿಸುವಂತೆ ಹೀಗೆ ಮಾಡಿದೆನು. ದೇವರೇ, ನನ್ನ ಈ ಕಾರ್ಯವನ್ನು ನಿನ್ನ ನೆನಪಿನಲ್ಲಿಟ್ಟುಕೋ. ನನ್ನ ಮೇಲೆ ದಯವಿಟ್ಟು ನಿನ್ನ ಪ್ರೀತಿಯನ್ನು ತೋರಿಸು.


ನೀವು ಒಣಗಿ, ಸತ್ತ ಹೂವಿನೋಪಾದಿಯಾಗುವ ಮೊದಲೇ ನಿಮ್ಮ ಜೀವಿತವನ್ನು ಮಾರ್ಪಡಿಸಿರಿ. ಬಿಸಿಲೇರಿದಾಗ ಹೂವು ಬಾಡಿಹೋಗಿ ಒಣಗುತ್ತದೆ. ಅದೇ ಪ್ರಕಾರ ಯೆಹೋವನು ತನ್ನ ಕೋಪವನ್ನು ಪ್ರದರ್ಶಿಸುವಾಗ ನೀವು ಹಾಗೆ ಆಗುವಿರಿ. ಆದ್ದರಿಂದ ಯೆಹೋವನ ಕೋಪದ ದಿನವು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ ನಿಮ್ಮ ಜೀವಿತವನ್ನು ಬದಲಾಯಿಸಿರಿ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ಆದರೆ ಪ್ರತಿಯೊಬ್ಬನು ಕ್ರಮಬದ್ಧ ರೀತಿಯಲ್ಲಿ ಜೀವಂತವಾಗಿ ಎದ್ದುಬರುವನು. ಮೊಟ್ಟಮೊದಲನೆಯದಾಗಿ ಕ್ರಿಸ್ತನೇ ಎದ್ದುಬಂದನು. ಕ್ರಿಸ್ತನು ಮತ್ತೆ ಬರುವಾಗ ಕ್ರಿಸ್ತನಿಗೆ ಸೇರಿದ ಜನರು ಜೀವಂತವಾಗಿ ಎದ್ದುಬರುವರು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ನನ್ನ ಪ್ರಿಯನು ನನ್ನವನೇ! ನಾನು ಅವನವಳೇ! ಹಗಲು ತನ್ನ ಕೊನೆ ಉಸಿರೆಳೆಯುವತನಕ, ನೆರಳು ಓಡಿಹೋಗುವ ತನಕ


ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.


ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು.


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ನಾನು ನಿರ್ಮಿಸಿದ ಈ ಜನರು ನನಗೆ ಸ್ತೋತ್ರಗಾನ ಹಾಡುವರು.


ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು