Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:5 - ಪರಿಶುದ್ದ ಬೈಬಲ್‌

5 ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:5
63 ತಿಳಿವುಗಳ ಹೋಲಿಕೆ  

ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


‘ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯ ಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.


“ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


“ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”


“ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


“ಒಳ್ಳೆಯದಾಗುವಂತೆ ನಾವು ಕೇಡುಮಾಡೋಣ” ಎಂದು ಹೇಳುವುದಕ್ಕೂ ಅದಕ್ಕೂ ಯಾವ ವ್ಯತ್ಯಾಸವಿಲ್ಲ. ಅನೇಕ ಜನರು ನಮ್ಮನ್ನು ಟೀಕಿಸುತ್ತಾರೆ ಮತ್ತು ನಾವು ಅಂಥ ಸಂಗತಿಗಳನ್ನು ಬೋಧಿಸುತ್ತೇವೆ ಎಂದು ಹೇಳುತ್ತಾರೆ. ಆ ಜನರು ತಪ್ಪಿತಸ್ಥರಾಗಿದ್ದಾರೆ. ಅವರಿಗೆ ದಂಡನೆಯಾಗಲೇಬೇಕು.


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


“ನನ್ನ ಜನರೇ, ನನಗೆ ಕಿವಿಗೊಡಿರಿ, ನಾನು ನಿಮಗೆ ಒಡಂಬಡಿಕೆಯನ್ನು ಕೊಡುತ್ತಿರುವೆ. ಇಸ್ರೇಲೇ, ದಯವಿಟ್ಟು ಕಿವಿಗೊಡು!


ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.


“ಪರದೇಶಸ್ಥರನ್ನು ಮತ್ತು ಅನಾಥರನ್ನು ಯೋಗ್ಯವಾದ ರೀತಿಯಲ್ಲಿ ನೋಡಿಕೊಳ್ಳಬೇಕು. ವಿಧವೆಯರ ಬಟ್ಟೆಗಳನ್ನು ಒತ್ತೆಯಿಟ್ಟುಕೊಳ್ಳಕೂಡದು.


“ಒಬ್ಬನು ನೆರೆಯವನ ಹೆಂಡತಿಯೊಡನೆ ಲೈಂಗಿಕ ಸಂಬಂಧ ಹೊಂದಿದರೆ, ಆಗ ಅವರಿಬ್ಬರೂ ವ್ಯಭಿಚಾರ ಮಾಡಿದ ದೋಷಿಗಳಾಗಿದ್ದಾರೆ. ಆದ್ದರಿಂದ ಅವರಿಬ್ಬರಿಗೂ ಅಂದರೆ ಗಂಡಸಿಗೂ ಹೆಂಗಸಿಗೂ ಮರಣಶಿಕ್ಷೆಯಾಗಬೇಕು!


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.


ಮೂರು ದಿನಗಳಾದ ಮೇಲೆ ಯೋಸೇಫನು ಅವರಿಗೆ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು. ನೀವು ಈ ಕಾರ್ಯವೊಂದನ್ನು ಮಾಡಿದರೆ ನಾನು ನಿಮ್ಮನ್ನು ಉಳಿಸುತ್ತೇನೆ;


ನನ್ನ ಸಹೋದರ ಸಹೋದರಿಯರೇ, ನೀವು ವಾಗ್ದಾನ ಮಾಡುವಾಗ ಆಣೆ ಇಡಬೇಡಿರಿ. ಇದು ಬಹಳ ಮುಖ್ಯವಾದದ್ದು. ನಿಮ್ಮ ಹೇಳಿಕೆಯನ್ನು ನಿರೂಪಿಸಲು ಪರಲೋಕದ, ಭೂಲೋಕದ ಮತ್ತು ಬೇರಾವುದರ ಹೆಸರನ್ನೂ ಬಳಸಬೇಡಿ. ಹೌದಾಗಿದ್ದರೆ, “ಹೌದು” ಎನ್ನಿರಿ. ಇಲ್ಲವಾಗಿದ್ದರೆ, “ಇಲ್ಲ” ಎನ್ನಿರಿ. ನೀವು ಹೀಗೆ ಮಾಡಿದರೆ, ನಿಮಗೆ ದೋಷಿಗಳೆಂಬ ತೀರ್ಪಾಗುವುದಿಲ್ಲ.


ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.


ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು!


ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.


ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.


ನಿಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ.


“ಮಾಟಗಾರ್ತಿಯ ಮಕ್ಕಳೇ, ಇಲ್ಲಿಗೆ ಬನ್ನಿರಿ. ನಿಮ್ಮ ತಂದೆಯು ವ್ಯಭಿಚಾರದ ಅಪರಾಧವೆಸಗಿದ್ದಾನೆ. ನಿಮ್ಮ ತಾಯಿಯು ಸೂಳೆಯಾಗಿ ತನ್ನ ದೇಹವನ್ನು ಮಾರುತ್ತಿದ್ದಾಳೆ.


ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.”


ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ.


ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು.


ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನ್ನು ನಿಮ್ಮ ದೇಶದಿಂದ ಬಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನ್ನು ನಿಮ್ಮ ದೇಶದಿಂದ ಬಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ.


ಆಗ ಅವರು, “ನಿನ್ನ ದೇವರಾದ ಯೆಹೋವನು ಹೇಳಿದ ಎಲ್ಲವನ್ನು ನಾವು ಮಾಡದಿದ್ದಲ್ಲಿ ಯೆಹೋವನು ಸ್ವತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಬೇಕೆಂಬುದನ್ನು ತಿಳಿಸಲು ನಿನ್ನ ದೇವರಾದ ಯೆಹೋವನು ನಿನ್ನನ್ನು ಕಳುಹಿಸುತ್ತಾನೆಂದು ನಾವು ಬಲ್ಲೆವು.


ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.


ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ, ಇಷ್ಟವಿಲ್ಲದಿದ್ದರೆ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.


“ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ಅವರನ್ನು ಹಿಂದಕ್ಕೆ ಕಳುಹಿಸುವಾಗ ಬರೀಗೈಯಲ್ಲಿ ಕಳುಹಿಸಬಾರದು.


ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.


ವ್ಯಭಿಚಾರವು ಸುಟ್ಟು ನಾಶಮಾಡುವ ಬೆಂಕಿಯಂತಿದೆ. ನಾನು ಹೊಂದಿರುವ ಪ್ರತಿಯೊಂದನ್ನು ಅದು ನಾಶಮಾಡಿಬಿಡುತ್ತಿತ್ತು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು