Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:14 - ಪರಿಶುದ್ದ ಬೈಬಲ್‌

14 ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೋಹಾನನು ಸೆರೆಗೆ ಬಿದ್ದ ಮೇಲೆ ಯೇಸು ಗಲಿಲಾಯ ಸೀಮೆಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜುವಾಂವಾಕ್‍ ಬಂಧಿಖಾನ್ಯಾತ್ ಘಾಟಲ್ಲ್ಯಾನಿ, ತನ್ನಾ ಜೆಜು ಗಾಲಿಲಿಯಾಕ್ ಬರಿ ಖಬರ್ ಪರ್‍ಚಾರ್ ಕರುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:14
16 ತಿಳಿವುಗಳ ಹೋಲಿಕೆ  

ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು.


ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.


ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು.


“ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.


ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.


ಆದ್ದರಿಂದ ಹೆರೋದನು ಯೋಹಾನನನ್ನು ಸೆರೆಮನೆಗೆ ಹಾಕಿಸಿ ತನ್ನ ದುಷ್ಕೃತ್ಯಗಳೊಂದಿಗೆ ಮತ್ತೊಂದು ದುಷ್ಕೃತ್ಯವನ್ನು ಸೇರಿಸಿಕೊಂಡನು.


ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.


ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.


ಕ್ರಿಸ್ತ ಯೇಸುವಿನ ಸೇವಕನಾದ ಪೌಲನು ಬರೆಯುವ ಪತ್ರ. ದೇವರು ನನ್ನನ್ನು ಅಪೊಸ್ತಲನಾಗುವುದಕ್ಕೆ ಕರೆದನು. ದೇವರ ಸುವಾರ್ತೆಯನ್ನು ಎಲ್ಲಾ ಜನರಿಗೆ ತಿಳಿಸುವುದಕ್ಕಾಗಿ ನಾನು ಆರಿಸಲ್ಪಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು