Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:21 - ಪರಿಶುದ್ದ ಬೈಬಲ್‌

21 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್‌ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಸೇರಿದರು. ಕೂಡಲೆ ಸಬ್ಬತ್‍ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜು ಅನಿ ತೆಚಿ ಶಿಸಾ ಕಪರ್‍ನವ್ ಮನ್ತಲ್ಯಾ ಗಾವಾಕ್ ಗೆಲೆ. ಥೈ ಸಬ್ಬತಾಚ್ಯಾ ದಿಸಿ, ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ದೆವಾಚ್ಯಾ ವಿಶಯಾತ್ ಶಿಕ್ವುಕ್‍ಲಾಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:21
18 ತಿಳಿವುಗಳ ಹೋಲಿಕೆ  

ಸಬ್ಬತ್ ದಿನದಂದು ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು. ಆತನ ಉಪದೇಶವನ್ನು ಕೇಳಿ ಆಶ್ಚರ್ಯಗೊಂಡ ಅನೇಕ ಜನರು, “ಈ ಉಪದೇಶವನ್ನು ಮತ್ತು ಈ ಜ್ಞಾನವನ್ನು ಇವನು ಎಲ್ಲಿಂದ ಪಡೆದನು? ಇವನಿಗೆ ಕೊಟ್ಟವರು ಯಾರು? ಇವನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯು ಎಲ್ಲಿಂದ ಬಂತು?


ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಪೌಲನು ಎಂದಿನಂತೆ ಯೆಹೂದ್ಯರನ್ನು ಭೇಟಿಯಾಗಲು ಈ ಸಭಾಮಂದಿರದೊಳಗೆ ಹೋದನು. ಅವನು ಮೂರು ವಾರಗಳವರೆಗೆ ಪ್ರತಿ ಸಬ್ಬತ್‌ದಿನದಂದು ಯೆಹೂದ್ಯರೊಂದಿಗೆ ಪವಿತ್ರ ಗ್ರಂಥದ ಆಧಾರದೊಡನೆ ಚರ್ಚಿಸಿ ವಿವರಿಸಿದನು.


ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.


ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.


ಒಂದು ಸಬ್ಬತ್‌ದಿನ ಯೇಸು ಸಭಾಮಂದಿರದಲ್ಲಿ ಉಪದೇಶಿಸಿದನು.


ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ!


ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.


ನಂತರ ಯೇಸು ಆ ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಆ ಜನರಿಗೆ ಉಪದೇಶಿಸಿದನು.


ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.


ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ಯೇಸು ಮತ್ತು ಆತನ ಶಿಷ್ಯರು ಸಭಾಮಂದಿರದಿಂದ ಹೊರಟು ಯಾಕೋಬ ಮತ್ತು ಯೋಹಾನರ ಸಂಗಡ ಸೀಮೋನ ಮತ್ತು ಅಂದ್ರೆಯರ ಮನೆಗೆ ಹೋದರು.


ಊರಿನ ಜನರೆಲ್ಲರೂ ಆ ಮನೆಯ ಮುಂದೆ ಒಟ್ಟುಗೂಡಿದರು.


ಮತ್ತೊಂದು ದಿನದಲ್ಲಿ, ಯೇಸು ಸಭಾಮಂದಿರದೊಳಕ್ಕೆ ಹೋದನು. ಅಲ್ಲಿ ಕೈಬತ್ತಿದ್ದ ಒಬ್ಬ ಮನುಷ್ಯನಿದ್ದನು.


ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’” ಎಂದು ಹೇಳಬೇಕೆಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು