Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:38 - ಪರಿಶುದ್ದ ಬೈಬಲ್‌

38 ಯೇಸು, “ಇಲ್ಲಿಗೆ ಸಮೀಪದಲ್ಲಿರುವ ಊರುಗಳಿಗೆ ನಾವು ಹೋಗೋಣ. ಆ ಸ್ಥಳಗಳಲ್ಲಿಯೂ ನಾನು ಉಪದೇಶಿಸಬೇಕು. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಜೆಜುನ್, “ಅಮಿ ಹಿತ್ಲ್ಯಾ ಅಜು-ಬಾಜುಚ್ಯಾ ಗಾವಾಕ್ನಿ ಜಾವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್, ಥೈಬಿ ಮಿಯಾ ದೆವಾಚಿ ಬರಿ ಖಬರ್ ಸಾಂಗುಕ್ ಪಾಜೆ; ತೆಚೆ ಸಾಟಿಚ್ ಮಿಯಾ ಯೆಲಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:38
10 ತಿಳಿವುಗಳ ಹೋಲಿಕೆ  

ಆದರೆ ಯೇಸು ಅವರಿಗೆ, “ನಾನು ಬೇರೆ ಊರುಗಳವರಿಗೂ ಸಹ ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಬೇಕು. ಇದಕ್ಕಾಗಿಯೇ ನನ್ನನ್ನು ಕಳುಹಿಸಲಾಗಿದೆ” ಎಂದು ಹೇಳಿದನು.


ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.


ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು.


ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು.


ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.


ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು.


ಅವರು ಯೇಸುವನ್ನು ಕಂಡುಕೊಂಡು, “ಜನರೆಲ್ಲರೂ ನಿನ್ನನ್ನೇ ಎದುರು ನೋಡುತ್ತಿದ್ದಾರೆ!” ಎಂದು ಹೇಳಿದರು.


ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು