Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:33 - ಪರಿಶುದ್ದ ಬೈಬಲ್‌

33 ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದುದರಿಂದ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಹೀಗಿರಲಾಗಿ ಅವರು - ನಾವು ಅರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದು ಅವರಿಗೆ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತಸೆ ಮನುನ್ ತೆನಿ ಜೆಜುಕ್ “ಅಮ್ಕಾ ಗೊತ್ತ್ ನಾ” ಮನುನ್ ಸಾಂಗ್ಲ್ಯಾನಿ. ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಕರುಕ್ ಲಾಗ್ಲಾ ಮನುನ್ ತುಮ್ಕಾ ಸಾಂಗಿನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:33
26 ತಿಳಿವುಗಳ ಹೋಲಿಕೆ  

ಆದರೆ ಇಂದಿಗೂ ಸಹ, ಮೋಶೆಯ ಧರ್ಮಶಾಸ್ತ್ರವನ್ನು ಓದುವಾಗ, ಅವರ ಮನಸ್ಸುಗಳ ಮೇಲೆ ಮುಸುಕು ಇರುತ್ತದೆ.


ದೇವರ ನಿಜ ಜ್ಞಾನವನ್ನು ಹೊಂದಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ದೇವರು ಅವರನ್ನು ಅವರ ಅಯೋಗ್ಯ ಭಾವಕ್ಕೆ ಒಪ್ಪಿಸಿಕೊಟ್ಟನು. ಆದ್ದರಿಂದ ಅವರು ತಾವು ಮಾಡಬಾರದ ಕೆಲಸಗಳನ್ನು ಮಾಡುತ್ತಾರೆ.


ಆ ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು.


ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?


ಬಳಿಕ ಅವರು, “ಯೋಹಾನನಿಗೆ ಎಲ್ಲಿಂದ ಅಧಿಕಾರ ಬಂದಿತೋ ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಆಗ ಯೇಸು, “ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆ ಎಂಬುದನ್ನು ನಾನು ಸಹ ನಿಮಗೆ ಹೇಳುವುದಿಲ್ಲ” ಎಂದನು.


ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟುಹೋದನು.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಕಾವಲುಗಾರರೆಲ್ಲಾ ಕುರುಡರಾಗಿದ್ದಾರೆ. ತಾವು ಮಾಡುತ್ತಿರುವುದು ಅವರಿಗೆ ತಿಳಿಯದು. ಅವರು ಬೊಗಳದ ನಾಯಿಗಳಂತಿರುವರು. ಅವುಗಳು ನೆಲದ ಮೇಲೆ ಬಿದ್ದುಕೊಂಡು ಮಲಗುವವು. ಅವುಗಳಿಗೆ ಮಲಗುವುದೆಂದರೆ ತುಂಬಾ ಪ್ರೀತಿ.


ಎತ್ತು ತನ್ನ ದಣಿಯನ್ನು ತಿಳಿದದೆ; ಕತ್ತೆಯು ತನ್ನ ದಣಿಯ ಕೊಟ್ಟಿಗೆಯನ್ನು ತಿಳಿದದೆ. ಆದರೆ ಇಸ್ರೇಲರು ನನ್ನನ್ನು ತಿಳಿದೇ ಇಲ್ಲ. ನನ್ನ ಜನರು ನನ್ನನ್ನು ಅರ್ಥಮಾಡಿಕೊಳ್ಳುವುದೇ ಇಲ್ಲ.”


ದೇವರು ಜ್ಞಾನಿಗಳನ್ನು ಅವರ ತಂತ್ರಗಳಲ್ಲೇ ಹಿಡಿದುಕೊಳ್ಳುವನು; ಮೋಸಗಾರರ ಆಲೋಚನೆಗಳನ್ನು ವಿಫಲಗೊಳಿಸುವನು.


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.


ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು