Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:15 - ಪರಿಶುದ್ದ ಬೈಬಲ್‌

15 ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕೊಡಬೇಕೋ ಬೇಡವೋ ಎಂದು ಆತನನ್ನು ಕೇಳಿದರು. ಆತನು ಅವರ ಕಪಟವನ್ನು ತಿಳಿದು - ನನ್ನನ್ನು ಯಾಕೆ ಪರೀಕ್ಷೆ ಮಾಡುತ್ತೀರಿ? ನನಗೆ ಒಂದು ಹಣವನ್ನು ತಂದು ತೋರಿಸಿರಿ ಅನ್ನಲು ಅವರು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆಜುನ್ ತೆಂಚೊ ಘಾತ್ ಕಳ್ವುನ್ ಘೆಟ್ಲ್ಯಾನ್ ಅನಿ “ತುಮಿ ಮಾಕಾಚ್ ಗೊಂದ್ಳುನ್ ಘಾಲುವಾ ಮನುನ್ ಕಶ್ಯಾಕ್ ಯವ್ಜುಕ್ ಲಾಗ್ಲ್ಯಾಸಿ? ಎಕ್ ಚಾಂದಿಚಿ ಪೈಸ್ಯಾಚಿ ಗಾಲಿ ಮಾಜ್ಯಾಕ್ಡೆ ದಿವಾ ಬಗುವಾ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:15
14 ತಿಳಿವುಗಳ ಹೋಲಿಕೆ  

ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು.


ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ಆದರೆ ಈ ಜನರು ತನಗೆ ಮೋಸಮಾಡಲು ಪ್ರಯತ್ನಿಸುತ್ತಿದ್ದಾರೆಂದು ಯೇಸುವಿಗೆ ತಿಳಿದಿತ್ತು.


ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ಪರೀಕ್ಷಿಸಲು, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.


ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?


“ನರಪುತ್ರನೇ, ಈ ಕಥೆಯನ್ನು ಇಸ್ರೇಲ್ ಜನಾಂಗಕ್ಕೆ ಹೇಳು. ಇದರ ಅರ್ಥವೇನೆಂದು ಅವರನ್ನು ಕೇಳು.


ಒಂದು ದಿನಕ್ಕೆ ಒಬ್ಬ ಕೆಲಸಗಾರನಿಗೆ ಒಂದು ಬೆಳ್ಳಿನಾಣ್ಯವನ್ನು ಕೊಡುವುದಾಗಿ ಹೇಳಿ ಆ ಕೆಲಸಗಾರರನ್ನು ಅವನು ತೋಟಕ್ಕೆ ಕಳುಹಿಸಿದನು.


ಫರಿಸಾಯರು ಮತ್ತು ಹೆರೋದ್ಯರು ಯೇಸುವಿನ ಬಳಿಗೆ ಬಂದು, ಆತನಿಗೆ, “ಉಪದೇಶಕನೇ, ನೀನು ಯಥಾರ್ಥನೆಂಬುದು ನಮಗೆ ತಿಳಿದಿದೆ. ನಿನ್ನ ಬಗ್ಗೆ ಜನರು ಏನು ಯೋಚಿಸುತ್ತಾರೆಂಬುದರ ಬಗ್ಗೆ ನಿನಗೆ ಹೆದರಿಕೆಯಿಲ್ಲ. ಜನರೆಲ್ಲರೂ ನಿನಗೆ ಒಂದೇ. ಮತ್ತು ನೀನು ದೇವರ ಮಾರ್ಗವನ್ನು ಕುರಿತು ಸತ್ಯವನ್ನೇ ಉಪದೇಶಿಸುತ್ತಿರುವೆ ಎಂದು ನಮಗೆ ಗೊತ್ತಿದೆ. ಆದ್ದರಿಂದ ನಮಗೆ ಹೇಳು: ಸೀಸರನಿಗೆ ತೆರಿಗೆ ಕೊಡುವುದು ಸರಿಯೋ? ಅಥವಾ ತಪ್ಪೋ? ನಾವು ತೆರಿಗೆಗಳನ್ನು ಕೊಡಬೇಕೇ ಅಥವಾ ಕೊಡಬಾರದೇ?” ಎಂದರು.


ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು.


ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿದರೆ ಆತನ ಮೇಲೆ ಅಪವಾದ ಹೊರಿಸಲು ಸಾಧ್ಯವಾಗುತ್ತದೆ ಎಂದು ಈ ಪ್ರಶ್ನೆಯನ್ನು ಕೇಳಿದರು. ಆದರೆ ಯೇಸು ತಲೆ ಬಾಗಿಸಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆಯತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು