Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:24 - ಪರಿಶುದ್ದ ಬೈಬಲ್‌

24 ಯೇಸು, “ನೀವು ಇಂಥಾ ತಪ್ಪನ್ನು ಮಾಡುವುದೇಕೆ? ಪವಿತ್ರಗ್ರಂಥವಾಗಲಿ, ದೇವರ ಶಕ್ತಿಯಾಗಲಿ ನಿಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೇಸು ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದಿರುವದರಿಂದಲೇ ತಪ್ಪುವವರಾಗಿದ್ದೀರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಜೆಜುನ್ ತೆಂಕಾ “ತುಮಿ ಕವ್ಡೆ ಚುಕುನ್ ಪಡ್ಲ್ಯಾಸಿ? ತುಮ್ಕಾ ಪವಿತ್ರ್ ಪುಸ್ತಕಾಚಿ ಉಲ್ಲಿಬಿ ಸಮ್ಜನ್‍ ನಾ, ಅನಿ ದೆವಾಚ್ಯಾ ತಾಕ್ತಿಚ್ಯಾ ವಿಶಯಾತ್ ತುಮ್ಕಾ ಗೊತ್ತುಚ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:24
25 ತಿಳಿವುಗಳ ಹೋಲಿಕೆ  

(ಯೇಸು ಸತ್ತು ಜೀವಂತವಾಗಿ ಎದ್ದುಬರಬೇಕೆಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿರುವುದು ಈ ಶಿಷ್ಯರಿಗೆ ಇನ್ನೂ ಅರ್ಥವಾಗಿರಲಿಲ್ಲ.)


ಯೇಸು, “ನೀವು ತಪ್ಪಾಗಿ ತಿಳಿದುಕೊಂಡಿರಲು ಕಾರಣವೇನೆಂದರೆ, ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ತಿಳಿದಿಲ್ಲ ಮತ್ತು ದೇವರ ಶಕ್ತಿಯ ಬಗ್ಗೆಯೂ ನಿಮಗೆ ಗೊತ್ತಿಲ್ಲ.


ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ.


ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.


ಹಿಂದಿನ ಕಾಲದಲ್ಲಿ ಬರೆಯಲ್ಪಟ್ಟಿರುವ ಪ್ರತಿಯೊಂದೂ ನಮ್ಮ ಉಪದೇಶಕ್ಕಾಗಿಯೇ ಬರೆಯಲ್ಪಟ್ಟಿದೆ. ನಾವು ನಿರೀಕ್ಷೆ ಉಳ್ಳವರಾಗಿರಬೇಕೆಂದು ಆ ಸಂಗತಿಗಳು ಬರೆಯಲ್ಪಟ್ಟಿವೆ. ಪವಿತ್ರ ಗ್ರಂಥವು ನಮಗೆ ಕೊಡುವ ತಾಳ್ಮೆಯಿಂದಲೂ ಶಕ್ತಿಯಿಂದಲೂ ಈ ನಿರೀಕ್ಷೆ ಬರುತ್ತದೆ.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ಯೇಸು ಶಿಷ್ಯರ ಕಡೆಗೆ ನೋಡಿ, “ಇದು ಮನುಷ್ಯರಿಗಷ್ಟೇ ಅಸಾಧ್ಯ, ದೇವರಿಗಲ್ಲ” ಎಂದನು.


ಎರಡು ದಿವಸಗಳ ತರುವಾಯ ನಮ್ಮನ್ನು ತಿರುಗಿ ಜೀವಂತ ಮಾಡುವನು. ಮೂರನೇ ದಿವಸದಲ್ಲಿ ನಮ್ಮನ್ನು ಎಬ್ಬಿಸುವನು. ಆಗ ನಾವು ಆತನ ಸಮೀಪದಲ್ಲಿ ವಾಸಿಸಬಹುದು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ದೇವರಿಗೆ ಯಾವುದೂ ಅಸಾಧ್ಯವಲ್ಲ,” ಎಂದು ಹೇಳಿದನು.


“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.


ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.


ಯೆಹೋವನಿಗೆ ಅಸಾಧ್ಯವಾದುದುಂಟೇ? ನಾನು ಮತ್ತೆ ವಸಂತಕಾಲದಲ್ಲಿ ಬರುವೆನು. ಆಗ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿದ್ದೇ ಇರುವನು” ಅಂದನು.


ಎಫ್ರಾಯೀಮನಿಗೆ ನಾನು ಸಾವಿರಾರು ವಿಧಿನಿಯಮಗಳನ್ನು ಬರೆದರೂ ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.


ಹೀಗಿರಲು ಜನರು ಪುನರುತ್ಥಾನ ಹೊಂದಿದಾಗ ಆಕೆಯು ಯಾರ ಹೆಂಡತಿಯಾಗುವಳು?” ಎಂದರು.


ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು