Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:26 - ಪರಿಶುದ್ದ ಬೈಬಲ್‌

26 ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಸತ್ತವರು ಬದುಕಿ ಏಳುತ್ತಾರೆಂಬ ವಿಷಯದಲ್ಲಿ ಹೇಳಬೇಕಾದರೆ - ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ಮೋಶೆಗೆ ನುಡಿದದ್ದನ್ನು ನೀವು ಮೋಶೆಯ ಗ್ರಂಥದಲ್ಲಿ ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮರಲ್ಲೆ ಪರ್ತುನ್ ಝಿತ್ತೆ ಹೊತಲ್ಯಾ ವಿಶಯಾತ್ ಮೊಯ್ಜೆಚ್ಯಾ ಪುಸ್ತಕಾತ್ ತ್ಯಾ ಜಳ್ತಲ್ಯಾ ಝಿಳಿಚ್ಯಾ ವಿಶಯಾತ್ ಲಿವಲ್ಲೆ ತುಮಿ ವಾಚುಕ್ನ್ಯಾಸಿ ಕಾಯ್? ಥೈ ದೆವ್ ಮೊಯ್ಜೆಕ್ “ಮಿಯಾ ಅಬ್ರಾಹಾಮಾಚೊ ದೆವ್, ಇಸಾಕಾಚೊ ದೆವ್ ಅನಿ ಜಾಕೊಬಾಚೊ ದೆವ್” ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:26
16 ತಿಳಿವುಗಳ ಹೋಲಿಕೆ  

ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ.


ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.


ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು