Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:11 - ಪರಿಶುದ್ದ ಬೈಬಲ್‌

11 ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಆ ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮ್ಕಾ ಧರುನ್ ನ್ಯಾಯ್ ಕರ್‍ತಲ್ಯಾ ಜಾಗ್ಯಾರ್ ವೊಡುನ್ ಹಾನುನ್ ಇಚಾರ್‍ನಿ ಕರ್‍ತಾನಾ, ತುಮಿ ತೆಂಕಾ ಕಾಯ್ ಸಾಂಗುಚೆ, ಕಾಯ್ ಬೊಲುಚೆ ಮನುನ್ ಚಿಂತಾ ಕರುನಕಾಸಿ, ಕಾಯ್ ಬೊಲುಚೆ ಮನುನ್ ತುಮ್ಕಾ ದಿಸ್ತಾ ತೆ ಬೊಲಾ, ಕಶ್ಯಾಕ್ ಮಟ್ಲ್ಯಾರ್, ತನ್ನಾ ತುಮಿ ಬೊಲಿನ್ಯಾಸಿ ಪವಿತ್ರ್ ಆತ್ಮೊ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:11
25 ತಿಳಿವುಗಳ ಹೋಲಿಕೆ  

ಆದರೆ ವಿವೇಕದಿಂದ ಮಾತಾಡಲು ಪವಿತ್ರಾತ್ಮನು ಅವನಿಗೆ ಸಹಾಯಮಾಡಿದನು. ಸ್ತೆಫನನ ಮಾತುಗಳು ಬಹು ಶಕ್ತಿಯುತವಾಗಿದ್ದ ಕಾರಣ ಅವನೊಂದಿಗೆ ವಾದಿಸಲು ಅವರಿಗೆ ಸಾಧ್ಯವಾಗದೆ,


ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.


ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.


ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.


ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.


ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.


ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.


ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,


ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.


“ಸಹೋದರರು ಸಹೋದರರನ್ನೇ, ತಂದೆಗಳು ತಮ್ಮ ಸ್ವಂತ ಮಕ್ಕಳನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ತಮ್ಮ ಸ್ವಂತ ತಂದೆತಾಯಂದಿರ ವಿರುದ್ಧ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


“ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು