Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 13:8 - ಪರಿಶುದ್ದ ಬೈಬಲ್‌

8 ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನಾಂಗಕ್ಕೆ ವಿರುದ್ಧ ಜನಾಂಗ, ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಇಳಿಯುವುವು. ಅಲ್ಲಲ್ಲಿ ಭೂಕಂಪಗಳು ಆಗುವುವು. ಕ್ಷಾಮ-ಡಾಮರಗಳು ತಲೆದೋರುವುವು. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಭೂಕಂಪಗಳು ಅಲ್ಲಲ್ಲಿ ಆಗುವವು; ಬರಗಳು ಬರುವವು; ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎಕ್ ದೆಸ್ ಅನಿ ಎಕ್ ದೆಸಾವರ್ತಿ ಅನಿ ಎಕ್ ರಾಜ್ ಅನಿ ಎಕ್ ರಾಜಾಚ್ಯಾ ವರ್‍ತಿ ಮಾರಾ-ಮಾರಿ ಕರುಕ್ ಉಟ್ತ್ಯಾತ್. ತಸೆಚ್ ಸಗ್ಳ್ಯಾಕ್ಡೆ ಭುಕಂಪಾ ಹೊತ್ಯಾತ್ ಅನಿ ಬರಗಾಲ್ ಪಡ್ತಾ; ಹೆ ಸಗ್ಳೆ ಎಕಾ ಬಾಯ್ಕೊಮನ್ಸಿಕ್ ಬಾನತ್ಪಾನಾಚೊ ತರಾಸ್ ಯೆಲ್ಯಾ ಬಾಸೆನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 13:8
21 ತಿಳಿವುಗಳ ಹೋಲಿಕೆ  

ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.


ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.


ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.


ಆಗ ಮತ್ತೊಂದು ಕುದುರೆಯು ಹೊರಗೆ ಬಂದಿತು. ಇದು ಕೆಂಪು ಕುದುರೆಯಾಗಿತ್ತು. ಈ ಕುದುರೆಯ ಮೇಲೆ ಕುಳಿತಿದ್ದ ಸವಾರನಿಗೆ ಲೋಕದಲ್ಲಿದ್ದ ಶಾಂತಿಯನ್ನು ತೆಗೆದುಹಾಕಲೂ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡಲೂ ಅವನಿಗೆ ಅಧಿಕಾರವನ್ನು ನೀಡಲಾಗಿತ್ತು. ಈ ಸವಾರನಿಗೆ ಒಂದು ಮಹಾಖಡ್ಗವನ್ನೂ ಕೊಡಲಾಗಿತ್ತು.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)


ಆ ಭಯಂಕರವಾದ ವ್ಯಾಧಿಯು ಶತ್ರುಗಳ ಶಿಬಿರದಲ್ಲಿರುವದು. ಅವರ ಬಳಿಯಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ ಮತ್ತು ಕತ್ತೆಗಳೆಲ್ಲಾ ಈ ವ್ಯಾಧಿಯಿಂದ ಸಂಕಟಪಡುವವು. ಆ ಸಮಯದಲ್ಲಿ ಆ ಜನರು ನಿಜವಾಗಿಯೂ ಯೆಹೋವನಿಗೆ ಭಯಪಡುವರು. ಪ್ರತಿಯೊಬ್ಬನೂ ತನ್ನ ನೆರೆಯವನ ಕೈಗಳನ್ನು ಹಿಡಿದುಕೊಳ್ಳುವನು ಮತ್ತು ಆ ನೆರೆಯವರು ಪರಸ್ಪರ ಹೊಡೆದಾಡಿಕೊಳ್ಳುವರು. ಯೆಹೂದವೂ ಜೆರುಸಲೇಮಿನೊಂದಿಗೆ ಕಾದಾಡುವದು. ಎಲ್ಲಾ ಜನಾಂಗಗಳ ಐಶ್ವರ್ಯವನ್ನು ಪಟ್ಟಣದ ಸುತ್ತಲೂ ಶೇಖರಿಸಿಟ್ಟಿರುವಾಗಲೂ ಇದು ಸಂಭವಿಸುವುದು. ಆಗ ಅಲ್ಲಿ ಬಹು ಸಂಖ್ಯೆಯಲ್ಲಿ ಬೆಳ್ಳಿಬಂಗಾರ ಮತ್ತು ಬಟ್ಟೆಗಳ ರಾಶಿ ಇರುವದು.


ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”


ಬಾಬಿಲೋನಿನ ರಾಜನು ಆ ಸೈನ್ಯಗಳ ಬಗ್ಗೆ ಕೇಳಿ ಬಹಳ ಗಾಬರಿಗೊಂಡನು; ಹೆದರಿಕೆಯಿಂದ ಅವನ ಕೈಗಳು ಚಲಿಸದಂತಾಗಿವೆ. ಪ್ರಸವವೇದನೆಯಂತೆ ಅವನಿಗೆ ವೇದನೆಯಾಗಿದೆ.”


ದಮಸ್ಕ ನಗರವು ನಿಬರ್ಲವಾಗಿದೆ. ಜನರು ಓಡಿಹೋಗಬಯಸುತ್ತಾರೆ, ಜನರು ಗಾಬರಿಗೊಂಡಿದ್ದಾರೆ. ಪ್ರಸವವೇದನೆಪಡುವ ಸ್ತ್ರೀಯಂತೆ ಸಂಕಟಪಡುತ್ತಿದ್ದಾರೆ.


“ವಿಪತ್ತುಗಳು ಬಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”


“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”


ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.


ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ. ಭಯದಿಂದ ನಾವು ಅಸಹಾಯಕರಾಗಿದ್ದೇವೆ. ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಬಳಲುತ್ತಿದ್ದೇವೆ.


ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ಗುಡುಗು, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಜ್ವಾಲೆ ಇವುಗಳಿಂದ ಶಿಕ್ಷಿಸಿದನು.


ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಈ ಸಂಗತಿಗಳು ನಡೆಯಲೇಬೇಕು.


“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು