Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:18 - ಪರಿಶುದ್ದ ಬೈಬಲ್‌

18 ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸುಸ್ವಾಮಿ, “ನನ್ನ ಸಂಗಡ ಊಟಮಾಡುವ ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುವನು, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಕೂತುಕೊಂಡು ಊಟಮಾಡುತ್ತಿರುವಾಗ ಯೇಸು - ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು, ಅವನು ನನ್ನ ಸಂಗಡ ಊಟಮಾಡುವವನೇ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಜೆವಾನ್ ಕರ್‍ತಾನಾ ಜೆಜುನ್ “ಮಿಯಾ ತುಮ್ಕಾ ಸಾಂಗ್ತಾ ತುಮ್ಚ್ಯಾತ್ಲೊ ಎಕ್ಲೊ ಮಾಕಾ ಘಾತ್ ಕರ್‍ನಾರ್ ಹಾಯ್.ತೊ ಮಾನುಸ್ ಹಿತ್ತೆ ಅತ್ತಾ ಮಾಜ್ಯಾ ವಾಂಗ್ಡಾಚ್ ಜೆವಾನ್ ಕರುಕ್ ಲಾಗ್ಲಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:18
36 ತಿಳಿವುಗಳ ಹೋಲಿಕೆ  

ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.


ಬಳಿಕ ಯೇಸು, “ನಾನು ಆರಿಸಿಕೊಂಡ ಹನ್ನೆರಡು ಮಂದಿ ನೀವೇ. ಆದರೆ ನಿಮ್ಮಲ್ಲಿರುವ ಒಬ್ಬನು ಸೈತಾನನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟನು.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನನ್ನು ನಂಬಿರುವವನು ನಿತ್ಯಜೀವವನ್ನು ಹೊಂದಿದ್ದಾನೆ.


ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.


ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.


ಅದಕ್ಕೆ ಉತ್ತರವಾಗಿ ಆತನು ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ.


ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ.


ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.


ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪ್ರವಾದಿ ತನ್ನ ಸ್ವಂತ ಊರಿನಲ್ಲಿ ಸ್ವೀಕೃತನಾಗುವುದಿಲ್ಲ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೆ ಇದನ್ನು ಕುಡಿಯುವುದೇ ಇಲ್ಲ” ಎಂದನು.


ನಾನು ಸತ್ಯವನ್ನು ಹೇಳುತ್ತೇನೆ. ಪ್ರಪಂಚದಲ್ಲಿ ಸುವಾರ್ತೆ ಸಾರಲ್ಪಡುವಲ್ಲೆಲ್ಲಾ ಈಕೆ ಮಾಡಿದ ಈ ಕಾರ್ಯವನ್ನು ತಿಳಿಸುವುದರಿಂದ ಜನರು ಈಕೆಯನ್ನು ನೆನಪುಮಾಡಿಕೊಳ್ಳುವರು” ಎಂದು ಹೇಳಿದನು.


ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಕ್ರಿಸ್ತನವರೆಂದು ಯಾವನಾದರೂ ನಿಮಗೆ ಕುಡಿಯಲು ನೀರು ಕೊಟ್ಟರೂ ಅವನಿಗೆ ಅದರ ಪ್ರತಿಫಲ ಖಂಡಿತವಾಗಿ ಸಿಕ್ಕುವುದು.


ಆಮೇಲೆ ಯೇಸು ಜನರಿಗೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿ ನಿಂತಿರುವ ನಿಮ್ಮಲ್ಲಿ ಕೆಲವು ಜನರು ತಾವು ಸಾಯುವುದಕ್ಕೆ ಮುಂಚೆ ದೇವರ ರಾಜ್ಯವು ಅಧಿಕಾರದೊಡನೆ ಬರುವುದನ್ನು ನೋಡುತ್ತಾರೆ” ಎಂದು ಹೇಳಿದನು.


ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.


ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದಿದ್ದರೆ ಮತ್ತು ನಿಮ್ಮ ಬೋಧನೆಯನ್ನು ಕೇಳದಿದ್ದರೆ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿ ಆ ಊರನ್ನು ಬಿಟ್ಟುಹೋಗಿರಿ. ಇದು ಅವರಿಗೆ ಎಚ್ಚರಿಕೆಯಾಗಿರುತ್ತದೆ.”


“ನಾನು ನಿಮಗೆ ಸತ್ಯವನ್ನು ಹೇಳುತ್ತಿದ್ದೇನೆ, ಜನರು ಮಾಡುವ ಎಲ್ಲಾ ಪಾಪಗಳಿಗೂ ದೇವದೂಷಣೆಗಳಿಗೂ ಕ್ಷಮೆ ದೊರೆಯಲು ಸಾಧ್ಯ.


ಅವರೆಲ್ಲರೂ ಊಟ ಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಇಲ್ಲಿರುವ ಹನ್ನೆರಡು ಮಂದಿಯಲ್ಲಿ ಒಬ್ಬನು ನನ್ನನ್ನು ವೈರಿಗಳಿಗೆ ಒಪ್ಪಿಸುತ್ತಾನೆ” ಎಂದು ಹೇಳಿದನು.


“ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.


ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನೀನು ಯೌವನಸ್ಥನಾಗಿದ್ದಾಗ, ನಡುಕಟ್ಟಿಕೊಂಡು ನಿನಗೆ ಇಷ್ಟವಾದ ಕಡೆಗೆಲ್ಲಾ ಹೋದೆ. ಆದರೆ ನೀನು ಮುದುಕನಾದಾಗ, ನಿನ್ನ ಕೈಗಳನ್ನು ಚಾಚುವೆ ಮತ್ತು ಬೇರೊಬ್ಬನು ನಿನ್ನ ನಡುಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ನಡೆಸಿಕೊಂಡು ಹೋಗುವನು” ಎಂದು ಹೇಳಿದನು.


“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸಾಯಂಕಾಲದಲ್ಲಿ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಆ ಮನೆಗೆ ಹೋದನು.


ಇದನ್ನು ಕೇಳಿದಾಗ ಶಿಷ್ಯರಿಗೆ ಬಹಳ ದುಃಖವಾಯಿತು. ಪ್ರತಿಯೊಬ್ಬ ಶಿಷ್ಯನೂ ಯೇಸುವಿಗೆ, “ಖಂಡಿತವಾಗಿ ನಾನು ನಿನಗೆ ದ್ರೋಹಮಾಡುವುದಿಲ್ಲ” ಎಂದನು.


ಯೇಸು, “ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.


“ನಾನು ನಿಮ್ಮೆಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ‘ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.’ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.


ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು