Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:5 - ಪರಿಶುದ್ದ ಬೈಬಲ್‌

5 ಅದು ಒಂದು ವರ್ಷದ ಸಂಪಾದನೆಗಿಂತ ಹೆಚ್ಚು ಬೆಲೆಬಾಳುತ್ತಿತ್ತು. ಅದನ್ನು ಮಾರಿ ಬಂದ ಹಣವನ್ನು ಬಡಜನರಿಗೆ ಕೊಡಬಹುದಾಗಿತ್ತು” ಎಂದು ಹೇಳಿ ಆ ಸ್ತ್ರೀಯನ್ನು ಕಟುವಾಗಿ ಟೀಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಳಿಗಿಂತ ಹೆಚ್ಚು ಬೆಲೆಗೆ ಮಾರಿ, ಆ ಹಣವನ್ನು ಬಡವರಿಗೆ ಕೊಡಬಹುದಾಗಿತ್ತಲ್ಲವೆ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು, ಆಕೆಯನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದನ್ನು ಮುನ್ನೂರು ಹಣಕ್ಕಿಂತ ಹೆಚ್ಚು ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಎಂದು ಹೇಳಿ ಆಕೆಗೆ ಛೀ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಹೆ ತೆಲ್ ತಿನ್ ಸೆಂಬರ್ ಚಾಂದಿಚ್ಯಾ ಪೈಸ್ಯಾಕ್ನಿ ಇಕುನ್ ಯೆಲ್ಲೆ ಪೈಸೆ ಗರಿಬಾಕ್ನಿ ದಿಲ್ಯಾರ್ ಹೊಯ್ನಸಿತ್ತೆ ಕಾಯ್?” ಮನುನ್ ತ್ಯಾ ಬಾಯ್ಕೊಮನ್ಸಿಕ್ ಜೊರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:5
17 ತಿಳಿವುಗಳ ಹೋಲಿಕೆ  

ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.


ಈ ದುರ್ಬೋಧಕರಾದರೋ ಗುಣುಗುಟ್ಟುವವರೂ ತಪ್ಪು ಹುಡುಕುವವರೂ ದುರಾಶೆಗಳಿಗೆ ಬಲಿಯಾದವರೂ ಬಡಾಯಿಕೊಚ್ಚುವವರೂ ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರೂ ಆಗಿದ್ದಾರೆ.


ನೀವು ಮಾಡುವ ಪ್ರತಿಯೊಂದನ್ನು ಗುಣಗುಟ್ಟದೆಯೂ ವಿವಾದವಿಲ್ಲದೆಯೂ ಮಾಡಿರಿ.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.


ಅದಕ್ಕೆ ಯೇಸು, “ನೀವು ಗುಣುಗುಟ್ಟುತ್ತಿರುವುದನ್ನು ನಿಲ್ಲಿಸಿರಿ.


ಫಿಲಿಪ್ಪನು, “ಇಲ್ಲಿರುವ ಪ್ರತಿಯೊಬ್ಬರಿಗೆ ರೊಟ್ಟಿಯ ಒಂದು ತುಂಡನ್ನು ಕೊಡಬೇಕಾದರೆ, ಇನ್ನೂರು ದಿನಾರಿ ನಾಣ್ಯಗಳಾದರೂ ಬೇಕು” ಎಂದು ಉತ್ತರಕೊಟ್ಟನು.


ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.


ಅವರು ತಮ್ಮ ಬೆಳ್ಳಿನಾಣ್ಯವನ್ನು ತೆಗೆದುಕೊಂಡಾಗ ತೋಟದ ಯಜಮಾನನ ಬಗ್ಗೆ ಗೊಣಗುಟ್ಟುತ್ತಾ,


“ತರುವಾಯ, ಅದೇ ಸೇವಕನು ತನಗೆ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕಾಗಿದ್ದ ಬೇರೊಬ್ಬ ಸೇವಕನನ್ನು ಕಂಡು ಅವನ ಕುತ್ತಿಗೆ ಹಿಡಿದು, ‘ನೀನು ನನಗೆ ಕೊಡಬೇಕಾಗಿರುವ ಹಣವನ್ನು ಕೊಡು’ ಎಂದನು.


ನಮ್ಮ ಪೂರ್ವಿಕರು ತಮ್ಮತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ದೇವರ ಮಾತಿಗೆ ವಿಧೇಯರಾಗಲಿಲ್ಲ.


ನಿಮ್ಮನಿಮ್ಮ ಗುಡಾರಗಳಲ್ಲಿ ಯೆಹೋವನ ವಿರುದ್ಧವಾಗಿ ಗೊಣಗುಟ್ಟಿದಿರಿ, ‘ನಮ್ಮ ಯೆಹೋವನು ನಮ್ಮನ್ನು ದ್ವೇಷಿಸುತ್ತಾನೆ! ನಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ಅಮೋರಿಯರಿಂದ ನಾಶಪಡಿಸುತ್ತಿದ್ದಾನೆ!


ಅಲ್ಲಿದ್ದ ಕೆಲವು ಶಿಷ್ಯರು ಇದನ್ನು ನೋಡಿ ಕೋಪಗೊಂಡು ಆಕ್ಷೇಪಿಸಿದರು. “ಆ ಪರಿಮಳತೈಲವನ್ನು ಹಾಳುಮಾಡಿದ್ದೇಕೆ?


ಯೇಸು, “ಆಕೆಗೆ ತೊಂದರೆ ಕೊಡಬೇಡಿ. ನೀವು ಆಕೆಯನ್ನು ಕಾಡಿಸುವುದೇಕೆ? ಅವಳು ನನಗಾಗಿ ಬಹಳ ಒಳ್ಳೆಯದನ್ನು ಮಾಡಿದಳು.


ಅದನ್ನು ಬಹಳ ಹಣಕ್ಕೆ ಮಾರಿ ಬಡ ಜನರಿಗೆ ಕೊಡಬಹುದಾಗಿತ್ತಲ್ಲಾ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು