Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 14:58 - ಪರಿಶುದ್ದ ಬೈಬಲ್‌

58 “ಈ ಮನುಷ್ಯನು, ‘ಕೈಯಿಂದ ಕಟ್ಟಿದ ಈ ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕೈಯಿಂದ ಕಟ್ಟಿಲ್ಲದ ಇನ್ನೊಂದು ದೇವಾಲಯವನ್ನು ಕಟ್ಟುತ್ತೇನೆ’ ಎಂದು ಹೇಳಿದ್ದನ್ನು ನಾವು ಕೇಳಿದೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 “ ‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ಹ್ಯೊ ಮಾನುಸ್, ಮಾನ್ಸಾನಿ ಭಾಂದಲ್ಲಿ ದೆವಾಚಿ ಗುಡಿ ಮೊಡುನ್, ತಿನ್ ದಿಸಾ ಹೊಲ್ಲ್ಯಾ ಮಾನಾ “ಮಿಯಾ ತಿ ಭಾಂದ್ತಾ” ಖರೆ ಮಾನ್ಸಾನ್ ಭಾಂಧಲ್ಲ್ಯಾ ಸರ್ಕೆ ನ್ಹಯ್, ಮನುನ್ ಸಾಂಗ್ತಲೆ ಅಮಿ ಆಯ್ಕ್ಲಾಂವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 14:58
11 ತಿಳಿವುಗಳ ಹೋಲಿಕೆ  

ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.


ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.


ಯೇಸು, “ಈ ದೇವಾಲಯವನ್ನು ಕೆಡವಿರಿ, ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟುತ್ತೇನೆ” ಎಂದು ಉತ್ತರಕೊಟ್ಟನು.


ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


“ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:


ಅಲ್ಲಿ ನಡೆದುಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ.


ನೀನು ಆ ಪ್ರತಿಮೆಯನ್ನು ನೋಡುತ್ತಿದ್ದಾಗ ನಿನಗೊಂದು ಬಂಡೆಯು ಕಾಣಿಸಿತು. ಆ ಬಂಡೆಯು ತನ್ನಷ್ಟಕ್ಕೆ ತಾನೇ ಸಡಿಲಗೊಂಡಿತು; ಯಾರೂ ಅದನ್ನು ಒಡೆಯಲಿಲ್ಲ. ಆಮೇಲೆ ಆ ಬಂಡೆಯು ಗಾಳಿಯಲ್ಲಿ ಹಾರಿಬಂದು ಆ ಪ್ರತಿಮೆಯ ಕಬ್ಬಿಣ ಮತ್ತು ಮಣ್ಣಿನ ಪಾದಗಳಿಗೆ ಅಪ್ಪಳಿಸಿತು. ಆ ಬಂಡೆಯು ಪ್ರತಿಮೆಯ ಪಾದಗಳನ್ನು ಒಡೆದು ಪುಡಿಪುಡಿ ಮಾಡಿತು.


“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.


“ಈ ಮನುಷ್ಯನು, ‘ನಾನು ದೇವರ ಆಲಯವನ್ನು ಕೆಡವಿ ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ’ ಎಂದು ಹೇಳಿದನು” ಎಂಬುದಾಗಿ ತಿಳಿಸಿದರು.


ನಂತರ ಕೆಲವು ಜನರು ನಿಂತುಕೊಂಡು, ಯೇಸುವಿನ ವಿರುದ್ಧ ಕೆಲವು ಅಪವಾದಗಳನ್ನು ಹೊರಿಸುತ್ತಾ,


ಆದರೂ ಜನರು ಹೇಳಿದ ಈ ಸಂಗತಿಗಳು ಹೊಂದಿಕೆಯಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು