Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:10 - ಪರಿಶುದ್ದ ಬೈಬಲ್‌

10 ಮಹಾಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಬಂಧಿಸಿ ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಮುಖ್ಯಯಾಜಕರು ಅಸೂಯೆಯಿಂದಲೇ ಯೇಸುವನ್ನು ತನಗೆ ಒಪ್ಪಿಸಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮುಖ್ಯಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮುಖ್ಯ ಯಾಜಕಾನಿ ಪೊಟಾತ್ ಆಗ್ ಪಡುನ್ ಜೆಜುಕ್ ಧರುನ್ ಅಪ್ನಾಕ್ಡೆ ಘೆವ್ನ್ ಯೆಲ್ಯಾತ್ ಮನುನ್ ಪಿಲಾತಾಕ್ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:10
13 ತಿಳಿವುಗಳ ಹೋಲಿಕೆ  

ಕೋಪವು ಕ್ರೂರ; ಅದು ಪ್ರವಾಹದಂತೆ ನಾಶಕರ. ಹೊಟ್ಟೆಕಿಚ್ಚು ಅದಕ್ಕಿಂತಲೂ ನಾಶಕರ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.


ನೀವು ಕಾಯಿನನಂತಿರಬೇಡಿ. ಅವನು ಕೆಡುಕನಿಗೆ ಸೇರಿದವನಾಗಿದ್ದನು. ಅವನು ತನ್ನ ತಮ್ಮನನ್ನು (ಹೇಬೆಲ) ಕೊಂದುಹಾಕಿದನು. ಅವನು ತನ್ನ ತಮ್ಮನನ್ನು ಕೊಂದದ್ದೇಕೆ? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ಒಳ್ಳೆಯವುಗಳೂ ಆಗಿದ್ದರಿಂದಲೇ.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು.


ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು.


ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು