Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 15:15 - ಪರಿಶುದ್ದ ಬೈಬಲ್‌

15 ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಪಿಲಾತನು ಜನರ ಮನಸ್ಸನ್ನು ಸಮಾಧಾನಪಡಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾಕ್ನಿ ಕುಶಿ ಕರುಕ್ ಮನುನ್ ಪಿಲಾತಾನ್ ಬಾರಾಬ್ಬಾಸಾಕ್ ತೆಂಚೆ ಸಾಟ್ನಿ ಸೊಡುನ್ ದಿಲ್ಯಾನ್. ಮಾನಾ ಜೆಜುಕ್ ಬಾರ್‍ಕೊಲಾನಿ ಮಾರುನ್ ಕುರ್ಸಾರ್ ಮಾರುಕ್ ಮನುನ್ ಸಯ್ನಿಕಾಂಚ್ಯಾ ಹಾತಾತ್ ಒಪಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 15:15
17 ತಿಳಿವುಗಳ ಹೋಲಿಕೆ  

ಬಳಿಕ, ಯೇಸುವನ್ನು ಕರೆದುಕೊಂಡು ಹೋಗಿ, ಕೊರಡೆಯಿಂದ ಹೊಡೆಯಬೇಕೆಂದು ಪಿಲಾತನು ಆಜ್ಞಾಪಿಸಿದನು.


ಆಗ ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊರಡೆಗಳಿಂದ ಹೊಡೆಯಿಸಿ ಶಿಲುಬೆಗೇರಿಸಲು ಸೈನಿಕರಿಗೆ ಒಪ್ಪಿಸಿಬಿಟ್ಟನು.


ನನ್ನ ಬೆನ್ನಿಗೆ ಹೊಡೆಯಲೂ ನನ್ನ ಗಡ್ಡವನ್ನು ಕೀಳಲೂ ಅವರಿಗೆ ನನ್ನನ್ನು ಒಪ್ಪಿಸಿಕೊಡುತ್ತೇನೆ. ಅವರು ನನ್ನನ್ನು ಬೈದು ನನ್ನ ಮುಖಕ್ಕೆ ಉಗುಳಿದರೂ ನಾನು ನನ್ನ ಮುಖವನ್ನು ಅಡಗಿಸುವದಿಲ್ಲ.


ಆ ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುತ್ತಾನೆ” ಎಂದು ತಿಳಿಸಿದನು.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಆಗ ಪಿಲಾತನು, ಯೇಸುವನ್ನು ಶಿಲುಬೆಗೇರಿಸಲು ಅವರಿಗೆ ಒಪ್ಪಿಸಿಕೊಟ್ಟನು. ಸೈನಿಕರು ಯೇಸುವನ್ನು ಕರೆದೊಯ್ದರು.


ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.


ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.


ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.


ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ಅವರು ಆತನಿಗೆ ಕೊರಡೆಗಳಿಂದ ಹೊಡೆಯುವರು ಮತ್ತು ಆತನನ್ನು ಕೊಲ್ಲುವರು! ಆದರೆ ಆತನು ತನ್ನ ಮೂರನೇ ದಿನದಲ್ಲಿ ಮತ್ತೆ ಜೀವಂತವಾಗಿ ಎದ್ದುಬರುವನು” ಅಂದನು.


ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.


ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು. ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.


ಆದ್ದರಿಂದ ನಾನು ಇವನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು