Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:5 - ಪರಿಶುದ್ದ ಬೈಬಲ್‌

5 ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಮಾಧಿಯೊಳಕ್ಕೆ ಪ್ರವೇಶಿಸಿ ನೋಡುವಾಗ, ಬಿಳಿಯ ಬಟ್ಟೆ ಧರಿಸಿದ್ದ ಯುವಕನೊಬ್ಬನು ಅಲ್ಲಿ ಬಲಗಡೆ ಕುಳಿತಿರುವುದನ್ನು ಕಂಡು, ಅವರು ಬೆಚ್ಚಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಸಮಾಧಿಯೊಳಕ್ಕೆ ಹೋಗಿ ಒಬ್ಬ ಯೌವನಸ್ಥನು ಬಿಳೀ ಅಂಗಿಯನ್ನು ತೊಟ್ಟುಕೊಂಡು ಬಲಗಡೆ ಕೂತಿರುವದನ್ನು ಕಂಡು ಬೆಚ್ಚಿ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆನಿ ಸಮಾದಿತ್ ಭುತ್ತುರ್ ಗೆಲ್ಲ್ಯಾ ತನ್ನಾ ಉಜ್ವ್ಯಾ ಬಾಜುಕ್ ಫ್ಹಾಂಡ್ರೆ ಕಪ್ಡೆ ನೆಸುನ್ ಬಸಲ್ಲೊ ಎಕ್ ದಾನ್ಡಗೊ ಮಾನುಸ್ ತೆಂಕಾ ದಿಸ್ಲೊ, ತೆಕಾ ಬಗುನ್ ತೆನಿ ಭಿಯಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:5
14 ತಿಳಿವುಗಳ ಹೋಲಿಕೆ  

ಬಳಿಕ ಆ ಮತ್ತೊಬ್ಬ ಶಿಷ್ಯನು ಒಳಗೆ ಹೋದನು. ಸಮಾಧಿಯನ್ನು ಮೊದಲು ತಲುಪಿದವನೇ ಆ ಶಿಷ್ಯನು. ಅವನು ಸಂಭವಿಸಿರುವುದನ್ನು ಕಂಡು ನಂಬಿಕೊಂಡನು.


ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು.


ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು.


ಆ ಜನರು ಯೇಸುವನ್ನು ನೋಡಿದಾಗ ಬಹಳ ಆಶ್ಚರ್ಯಪಟ್ಟು ಆತನನ್ನು ಸ್ವಾಗತಿಸಲು ಆತನ ಬಳಿಗೆ ಬಂದರು.


ಆಮೇಲೆ ದರ್ಶನದಲ್ಲಿನ ಆ ಮನುಷ್ಯನು ಪುನಃ ಮಾತನಾಡಲು ಪ್ರಾರಂಭಿಸಿದನು. ಅವನು, “ದಾನಿಯೇಲನೇ, ಭಯಪಡಬೇಡ. ನೀನು ಜ್ಞಾನಸಂಪಾದನೆ ಮಾಡಬೇಕೆಂದೂ ದೇವರೆದುರಿಗೆ ಭಕ್ತಿವಿನಯಗಳಿಂದ ವರ್ತಿಸಬೇಕೆಂದೂ ತೀರ್ಮಾನಿಸಿದ ಮೊದಲ ದಿನದಿಂದಲೇ ಆತನು ನಿನ್ನ ಪ್ರಾರ್ಥನೆಗಳನ್ನು ಆಲಿಸುತ್ತಿದ್ದಾನೆ. ನೀನು ಪ್ರಾರ್ಥನೆ ಮಾಡಿದ್ದರಿಂದಲೇ ನಾನು ಇಲ್ಲಿಗೆ ಬಂದೆನು.


ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.


ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಪೇತ್ರನನ್ನು, ಯಾಕೋಬನನ್ನು ಮತ್ತು ಯೋಹಾನನನ್ನು ತನ್ನ ಜೊತೆ ಕರೆದುಕೊಂಡು ಹೋದನು. ನಂತರ ಯೇಸು ಬಹಳ ಗಲಿಬಿಲಿಗೊಂಡು, ದುಃಖದಿಂದ ತುಂಬಿದವನಾದನು.


ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು