Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 16:9 - ಪರಿಶುದ್ದ ಬೈಬಲ್‌

9 ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 [ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆಕೆಗೆ ಏಳು ದೆವ್ವಗಳನ್ನು ಬಿಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜು ಮರಲ್ಲ್ಯಾನಿತ್ನಾ ಝಿತ್ತೊ ಹೊವ್ನ್ ಉಟುನ್, ಮಟ್ಲ್ಯಾರ್ ಆಯ್ತಾರ್‍ಚೆ ನಸ್ಕಾತ್, ಸಗ್ಳ್ಯಾನಿಕಿ ಅದ್ದಿ ಮರಿ ಮಾಗ್ದೆಲಿನಾಕ್ ದಿಸ್ಲೊ. ಜೆಜುನ್ ತಿಚ್ಯಾ ಆಂಗಾತ್ನಾ ಸಾತ್ ಗಿರೆ ಕಾಡಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 16:9
12 ತಿಳಿವುಗಳ ಹೋಲಿಕೆ  

ಕೆಲವು ಸ್ತ್ರೀಯರೂ ಆತನೊಡನೆ ಇದ್ದರು. ಈ ಸ್ತ್ರೀಯರು ಆತನಿಂದ ತಮ್ಮ ಕಾಯಿಲೆಗಳಿಂದ ಗುಣಹೊಂದಿದವರೂ ದೆವ್ವಗಳ ಕಾಟದಿಂದ ಬಿಡುಗಡೆ ಹೊಂದಿದವರೂ ಆಗಿದ್ದರು. ಈ ಸ್ತ್ರೀಯರಲ್ಲಿ ಒಬ್ಬಳ ಹೆಸರು ಮರಿಯಳು. ಆಕೆ ಮಗ್ದಲ ಎಂಬ ಊರಿನವಳು. ಯೇಸು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದನು.


ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತುಕೊಂಡಿದ್ದನು.


ಮಗ್ದಲದ ಮರಿಯಳು ಹಾಗೂ ಯೋಸೆಯನ ತಾಯಿಯಾದ ಮರಿಯಳು ಸಮಾಧಿ ಮಾಡಿದ ಸ್ಥಳವನ್ನು ಗುರುತಿಸಿಕೊಂಡರು.


ಈ ಸ್ತ್ರೀಯರು ಯಾರೆಂದರೆ: ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಬೇರೆ ಕೆಲವು ಸ್ತ್ರೀಯರು. ನಡೆದ ಪ್ರತಿಯೊಂದನ್ನೂ ಈ ಸ್ತ್ರೀಯರು ಅಪೊಸ್ತಲರಿಗೆ ತಿಳಿಸಿದರು.


ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೇಫನ ತಾಯಿಯಾದ ಮರಿಯಳು, ಹಾಗೂ ಯೋಹಾನ ಮತ್ತು ಯಾಕೋಬನ ತಾಯಿ ಅಲ್ಲಿದ್ದರು.


ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.


ಭಾನುವಾರದಂದು, ನಾವೆಲ್ಲರು ಪ್ರಭುವಿನ ರಾತ್ರಿ ಭೋಜನಕ್ಕೆ ಒಟ್ಟಾಗಿ ಸೇರಿದೆವು. ಸಭೆ ಸೇರಿಬಂದಿದ್ದ ಜನರೊಂದಿಗೆ ಪೌಲನು ಮಾತಾಡಿದನು. ಅವನು ಮರುದಿನ ಅಲ್ಲಿಂದ ಹೊರಡಬೇಕೆಂದು ಅಲೋಚಿಸಿಕೊಂಡಿದ್ದನು. ಪೌಲನು ಮಧ್ಯರಾತ್ರಿಯವರೆಗೂ ಮಾತಾಡುತ್ತಲೇ ಇದ್ದನು.


ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ.


ನಾಮಾನನು ತನ್ನ ಒಡೆಯನಾದ ಅರಾಮ್ಯರ ರಾಜನ ಬಳಿಗೆ ಹೋದನು. ಇಸ್ರೇಲಿನ ಹುಡುಗಿಯು ಹೇಳಿದ ಸಂಗತಿಗಳನ್ನು, ನಾಮಾನನು ಅರಾಮ್ಯರ ರಾಜನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು