Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:17 - ಪರಿಶುದ್ದ ಬೈಬಲ್‌

17 ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹೆ ಆಯ್ಕುನ್ ಜೆಜುನ್ “ಅರಾಮ್ ಹೊತ್ತ್ಯಾಕ್ನಿ ವಗ್ದುಳ್ಯಾಚಿ ಗರಜ್ ನಾ. ಅರಾಮ್ ನಸಲ್ಯಾಕ್ನಿ ವಗ್ದುಳ್ಯಾಚಿ ಗರಜ್ ರ್‍ಹಾತಾ. ಮಿಯಾ ಬರ್‍ಯಾ ಲೊಕಾಕ್ನಿ ನ್ಹಯ್, ಪಾಪಿ ಲೊಕಾಕ್ನಿ ಬಲ್ವುಕ್ ಮನುನ್ ಯೆಲಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:17
21 ತಿಳಿವುಗಳ ಹೋಲಿಕೆ  

ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.


ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು.


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


ಹಿರಿಮಗನು ತಂದೆಗೆ, ‘ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.


“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು