Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:2 - ಪರಿಶುದ್ದ ಬೈಬಲ್‌

2 ಜನರು ಗುಂಪುಗುಂಪಾಗಿ ಯೇಸುವಿನ ಉಪದೇಶವನ್ನು ಕೇಳಲು ಒಟ್ಟುಗೂಡಿದರು. ಮನೆಯು ತುಂಬಿಹೋಯಿತು. ಅಲ್ಲಿ ನಿಲ್ಲಲು ಹೊರಗಡೆಯಲ್ಲಿಯೂ ಸ್ಥಳವಿರಲಿಲ್ಲ. ಯೇಸು ಉಪದೇಶಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಥೈ ಎವ್ಡಿ ಲೊಕಾ ಗೊಳಾ ಹೊಲ್ಲಿಕಿ ಮಟ್ಲ್ಯಾರ್, ತ್ಯಾ ಘರಾಚ್ಯಾ ದಾರಾತ್ ಪಾಯ್ ಥವ್ಕ್ ಸೈತ್ ಜಾಗೊ ನತ್ತೊ. ಜೆಜು ಥೈ ಗೊಳಾಹೊಲ್ಲ್ಯಾ ಲೊಕಾಕ್ನಿ, ದೆವಾಚ್ಯಾ ಗೊಸ್ಟಿಯಾ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:2
20 ತಿಳಿವುಗಳ ಹೋಲಿಕೆ  

ಯೇಸು ಮತ್ತೆ ಸರೋವರಕ್ಕೆ ಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿ ಅಲ್ಲಿಗೆ ಹೋದದ್ದರಿಂದ ಆತನು ಅವರಿಗೆ ಉಪದೇಶಿಸಿದನು.


ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು.


ಪೌಲನು ಮತ್ತು ಅವನ ಸಂಗಡಿಗರು ಫ್ರಿಜಿಯ ಮತ್ತು ಗಲಾತ್ಯ ಪ್ರಾಂತ್ಯಗಳ ಮೂಲಕ ಹಾದುಹೋದರು. ಏಷ್ಯಾ ಸೀಮೆಯಲ್ಲಿ ಸುವಾರ್ತೆಯನ್ನು ತಿಳಿಸದಂತೆ ಪವಿತ್ರಾತ್ಮನು ಅವರನ್ನು ತಡೆದನು.


ಅವರು ದೇವರ ಸಂದೇಶವನ್ನು ಪೆರ್ಗ ಪಟ್ಟಣದಲ್ಲಿ ಬೋಧಿಸಿ, ಅಲ್ಲಿಂದ ಅತ್ತಾಲಿಯ ಪಟ್ಟಣಕ್ಕೆ ಬಂದರು.


ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.


ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು.


ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.


“ಈ ಸಾಮ್ಯದ ಅರ್ಥ ಹೀಗಿದೆ: ಬೀಜವು ದೇವರ ವಾಕ್ಯ.


ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.


ಅವರು ಯೇಸುವನ್ನು ಕಂಡುಕೊಂಡು, “ಜನರೆಲ್ಲರೂ ನಿನ್ನನ್ನೇ ಎದುರು ನೋಡುತ್ತಿದ್ದಾರೆ!” ಎಂದು ಹೇಳಿದರು.


ಊರಿನ ಜನರೆಲ್ಲರೂ ಆ ಮನೆಯ ಮುಂದೆ ಒಟ್ಟುಗೂಡಿದರು.


ಯೋಹಾನನನ್ನು ಸೆರೆಮನೆಗೆ ಹಾಕಿದ ಮೇಲೆ, ಯೇಸು ಗಲಿಲಾಯಕ್ಕೆ ಹೋಗಿ ಜನರಿಗೆ,


ಆಗ ಯೇಸು ಜನರಿಗೆ ಈ ಉಪದೇಶ ಮಾಡಿದನು:


ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.


ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.


ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.


ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು