Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:21 - ಪರಿಶುದ್ದ ಬೈಬಲ್‌

21 “ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ಆ ತೇಪೆಯು ಹಿಂಜಿಕೊಂಡು ಆ ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆಹಚ್ಚುವದಿಲ್ಲ; ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 “ಕೊನ್ಬಿ ಮಾನುಸ್, ಜುನ್ನ್ಯಾ ಅಂಗಿಕ್ ನ್ಹವ್ಯಾ ಫಾಳಿಚೊ ತುಕ್ಡೊ ಲಾವುನ್ ಶಿವಿನಾ, ಕಶ್ಯಾಕ್ ಮಟ್ಲ್ಯಾರ್, ತೊ ನ್ಹವೊ ತುಕ್ಡೊ ಮುದ್ದಾ ಹೊವ್ನ್ ತಿ ಅಂಗಿ ಅನಿ ಉಲ್ಲಿ ಪಿಂಜ್ತಾ. ಅನಿ ಪಿಂಜಲ್ಲೊ ಜಾಗೊ ಅನಿ ಉಲ್ಲೊ ಮೊಟೊ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:21
7 ತಿಳಿವುಗಳ ಹೋಲಿಕೆ  

“ಒಬ್ಬನು ಹರಿದುಹೋದ ಹಳೆ ಮೇಲಂಗಿಗೆ ಹೊಸ ಬಟ್ಟೆಯ ತುಂಡನ್ನು ತೇಪೆಹಾಕಿ ಹೊಲಿಯುವುದಿಲ್ಲ. ಒಂದುವೇಳೆ ಹೊಲಿದರೆ, ಆ ತೇಪೆಯು ಹಿಂಜಿಕೊಂಡು ಮೇಲಂಗಿಯಿಂದ ಕಿತ್ತುಬರುವುದು. ಆಗ ಆ ಮೇಲಂಗಿಯು ಮತ್ತಷ್ಟು ಹರಿದುಹೋಗುವುದು.


ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.


ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.


ಆದರೆ ಮದುಮಗನು ಅವರನ್ನು ಬಿಟ್ಟುಹೋಗುವ ಕಾಲ ಬರುತ್ತದೆ. ಆಗ ಅವನ ಗೆಳೆಯರು ವ್ಯಸನಪಡುತ್ತಾರೆ, ಉಪವಾಸ ಮಾಡುತ್ತಾರೆ.


ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು.


ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು