Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:24 - ಪರಿಶುದ್ದ ಬೈಬಲ್‌

24 ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್‌ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಫರಿಸಾಯರು ಆತನನ್ನು - ನೋಡು, ಇವರು ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ಯಾಕೆ ಮಾಡುತ್ತಾರೆ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಫರಿಸಾಯರು ಯೇಸುವಿಗೆ, “ಇಲ್ಲಿ ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಏಕೆ ಮಾಡುತ್ತಾರೆ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಹೆ ಫಾರಿಜೆವಾನಿ ಬಗಟ್ಲ್ಯಾನಿ ಅನಿ “ತುಜಿ ಶಿಸಾ ಅಶೆ ಕರ್‍ತಲೆ, ಅಮ್ಚ್ಯಾ ಖಾಯ್ದ್ಯಾಚ್ಯಾ ಪರ್‍ಕಾರ್ ಚುಕ್ ನ್ಹಯ್ ಕಾಯ್?” ಮನುನ್ ಜೆಜುಕ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:24
18 ತಿಳಿವುಗಳ ಹೋಲಿಕೆ  

ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.


ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.


ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.


ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.


“ಇವನು ಹೀಗೇಕೆ ಹೇಳುತ್ತಿದ್ದಾನೆ? ಇದು ದೇವದೂಷಣೆ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಲು ಸಾಧ್ಯ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಂಡರು.


ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


“ಅನ್ಯದೇಶದವರಲ್ಲಿ ಕೆಲವರು ಯೆಹೋವನನ್ನು ಅನುಸರಿಸುವರು. ಆತನನ್ನು ಸೇವಿಸಿ ಆತನ ನಾಮವನ್ನು ಪ್ರೀತಿಸುವರು. ಅವರು ಯೆಹೋವನ ಸೇವಕರಾಗುವುದಕ್ಕಾಗಿ ಆತನೊಂದಿಗೆ ಸೇರಿಕೊಳ್ಳುವರು. ಸಬ್ಬತ್‌ದಿವಸವನ್ನು ಆರಾಧನೆ ಮಾಡುವ ವಿಶೇಷ ದಿವಸವೆಂದು ನೆನಸಿ ಒಡಂಬಡಿಕೆಯನ್ನು ಪರಿಪಾಲಿಸುವರು.


ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”


ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.”


ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.


ಯೇಸು ಅವರಿಗೆ, “ದಾವೀದನು ಮತ್ತು ಅವನ ಜನರು ಹಸಿದು ಆಹಾರವನ್ನು ಬಯಸಿದಾಗ ಅವನೇನು ಮಾಡಿದನೆಂಬುದನ್ನು ನೀವು ಓದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು