Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 2:4 - ಪರಿಶುದ್ದ ಬೈಬಲ್‌

4 ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜನರು ಗುಂಪಾಗಿದ್ದದರಿಂದ ಅವರು ಆತನ ಹತ್ತಿರಕ್ಕೆ ಸೇರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ದ್ವಾರಮಾಡಿ ಪಾರ್ಶ್ವವಾಯುರೋಗಿಯು ಮಲಗಿದ್ದ ಹಾಸಿಗೆಯನ್ನು ಇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಲೊಕಾಂಚ್ಯಾ ಅಡ್ಚನಿಕ್‍ ಲಾಗುನ್, ತೆಂಕಾ ತ್ಯಾ ಮಾನ್ಸಾಕ್ ಜೆಜುಕ್ಡೆ ಘೆವ್ನ್ ಜಾವ್ಕ್ ಹೊವ್ಕ್ನಾ. ತಸೆ ಮನುನ್, ತೆನಿ ತ್ಯಾ ವಾರ್‍ಯಾನ್‍ ಮಾರಲ್ಲ್ಯಾ ಮಾನ್ಸಾಕ್ ಘೆವ್ನ್ ಜೆಜು ಹೊತ್ತ್ಯಾ ಘರಾ ವರ್‍ತಿ ಚೆಡ್ಲ್ಯಾನಿ, ಅನಿ ಜೆಜು ಹೊತ್ತ್ಯಾಕ್ಡೆ ತ್ಯಾ ಮಾನ್ಸಾಕ್ ಉತ್ರುಕ್ ಹೊಯ್ಸರ್ಕಿ ವಾಟ್ ಕರುನ್ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್, ಹಾತ್ರಾನಾಸಮೆತ್ ಜೆಜು ಹೊತ್ತ್ಯಾಕ್ಡೆ ಉತರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 2:4
3 ತಿಳಿವುಗಳ ಹೋಲಿಕೆ  

ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.


“ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು