Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:10 - ಪರಿಶುದ್ದ ಬೈಬಲ್‌

10 ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಆತನನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುನ್, ಸುಮಾರ್ ಅರಾಮ್ ನತ್ತ್ಯಾ ಲೊಕಾಕ್ನಿ ಗುನ್ ಕರಲ್ಲ್ಯಾನ್. ತಸೆ ಮನುನ್, ಹರ್‍ಎಕ್ ಅರಾಮ್ ನತ್ತೊ ಮಾನುಸ್, ಲೊಕಾಕ್ನಿ ಢಕ್ಲುನ್ಗೆತ್, ಜೆಜುಕ್ ಅಪಡ್ತಲೊ ಅವ್ಕಾಸ್ ಹುಡ್ಕುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:10
18 ತಿಳಿವುಗಳ ಹೋಲಿಕೆ  

ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.


ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.


ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.


ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.


ಅಲ್ಲಿ ಒಬ್ಬ ಸೇನಾಧಿಪತಿ ಇದ್ದನು. ಅವನ ಪ್ರಿಯ ಸೇವಕನೊಬ್ಬನು ಕಾಯಿಲೆಯಿಂದ ಸಾಯುವ ಸ್ಥಿತಿಯಲ್ಲಿದ್ದನು.


ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.”


ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.


ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.


ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.


ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.


ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು.


ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.


ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.


ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!


ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು