Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:22 - ಪರಿಶುದ್ದ ಬೈಬಲ್‌

22 ಜೆರುಸಲೇಮಿನ ಧರ್ಮೋಪದೇಶಕರು, “ಇವನೊಳಗೆ ದೆವ್ವಗಳ ಒಡೆಯನಾದ ಬೆಲ್ಜೆಬೂಲನು ವಾಸಿಸುತ್ತಿದ್ದಾನೆ. ದೆವ್ವಗಳಿಂದ ಪೀಡಿತರಾಗಿರುವವರನ್ನು ಇವನು ಬಿಡಿಸುವುದು ದೆವ್ವಗಳ ಒಡೆಯನ ಸಹಾಯದಿಂದಲೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ಯೆರೂಸಲೇವಿುನಿಂದ ಬಂದಿದ್ದ ಶಾಸ್ತ್ರಿಗಳು - ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆರುಜಲೆಮಾತ್ನಾ ಯೆಲ್ಲೆ, ಖಾಯ್ದೆ ಸಿಕ್ವುತಲೆ, “ತೆಚ್ಯಾ ಆಂಗಾತ್ ಗಿರ್‍ಯಾಂಚೊ ವಡಿಲ್ ಬೆಎಲ್ಜೆಬುಲ್ ಹಾಯ್. ತ್ಯಾ ಗಿರ್‍ಯಾಚ್ಯಾ ಬಳಾನ್ ತೊ ಲೊಕಾಕ್ನಿಲಾಗಲ್ಲಿ ಗಿರೆ ಸೊಡ್ಸುತಾ,” ಮನುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:22
14 ತಿಳಿವುಗಳ ಹೋಲಿಕೆ  

ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಯೇಸುವಿನ ಬಳಿಗೆ ಬಂದು,


ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ?


ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.


ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದರು.


ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.


ಆದರೆ ಕೆಲವರು, “ದೆವ್ವದಿಂದ ಪೀಡಿತರಾಗಿರುವವರನ್ನು ಇವನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದು ಹೇಳಿದರು.


ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಿಂದ ಬಂದರು. ಅವರು ಯೇಸುವಿನ ಸುತ್ತಲೂ ಒಟ್ಟಿಗೆ ಸೇರಿದರು.


ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.’


ಜೆರುಸಲೇಮಿನಲ್ಲಿ ಆಚರಿಸುವ ಪ್ರತಿಷ್ಠೆಯ ಹಬ್ಬವು ನಡೆಯುತ್ತಿತ್ತು. ಅದು ಚಳಿಗಾಲದಲ್ಲಿ ಆಚರಿಸುವ ಹಬ್ಬ.


ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.


ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ; ಅವರು ನನ್ನನ್ನು ತಿರಸ್ಕರಿಸುತ್ತಾರೆ.


ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು