Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:24 - ಪರಿಶುದ್ದ ಬೈಬಲ್‌

24 ತನ್ನ ವಿರುದ್ಧವಾಗಿ ತಾನೇ ಹೋರಾಡುವ ರಾಜ್ಯ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಎಕ್ ರಾಜ್ ದೊನ್ ತಾಂಡೆ ಹೊವ್ನ್ ಎಕಾಮೆಕಾಚ್ಯಾ ವಿರೊದ್ ಝಗ್ಡುನ್ಗೆತ್ ರ್‍ಹಾಲ್ಯಾರ್, ತೊ ರಾಜ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:24
15 ತಿಳಿವುಗಳ ಹೋಲಿಕೆ  

ಆಮೇಲೆ ನಾನು “ಒಗ್ಗಟ್ಟು” ಎಂಬ ಹೆಸರಿನ ಕೋಲನ್ನು ಎರಡು ತುಂಡಾಗಿ ಮುರಿದೆನು. ಇಸ್ರೇಲ್ ಮತ್ತು ಯೆಹೂದ ರಾಜ್ಯಗಳ ಒಗ್ಗಟ್ಟು ಮುರಿಯಿತು ಎಂದು ತೋರಿಸುವದಕ್ಕಾಗಿ ನಾನು ಹಾಗೆ ಮಾಡಿದೆನು.


ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.


ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.


ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.


ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.


ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ.


ಆದ್ದರಿಂದ ಯೇಸು ಜನರನ್ನು ಒಟ್ಟಿಗೆ ಕರೆದು, ಅವರಿಗೆ ಸಾಮ್ಯಗಳ ಮೂಲಕ ಬೋಧಿಸಿ, “ಸೈತಾನನು ತನ್ನ ದೆವ್ವಗಳನ್ನು ಜನರಿಂದ ಬಲವಂತವಾಗಿ ಹೊರಡಿಸುವುದಿಲ್ಲ.


ಭೇದ ಹುಟ್ಟಿದ ಕುಟುಂಬ ಏಳಿಗೆ ಹೊಂದುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು