Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:7 - ಪರಿಶುದ್ದ ಬೈಬಲ್‌

7 ಯೇಸು ತನ್ನ ಶಿಷ್ಯರೊಂದಿಗೆ ಸರೋವರಕ್ಕೆ ಹೊರಟುಹೋದನು. ಗಲಿಲಾಯದ ಅನೇಕ ಜನರು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೇಸು ತನ್ನ ಶಿಷ್ಯರ ಕೂಡ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹುಜನರು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚ್ಯಾ ಮಾನಾ, ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಗಾಲಿಲಿಯಾ ಸಮುಂದರಾಚ್ಯಾ ದಂಡೆಕ್ ಗೆಲೊ. ಥೈ ಲೊಕಾಂಚೊ ಎಕ್ ಮೊಟೊ ತಾಂಡೊ ಜೆಜುಚ್ಯಾ ಭೊತ್ಯಾನಿ ಗೊಳಾಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:7
20 ತಿಳಿವುಗಳ ಹೋಲಿಕೆ  

ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.


ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.


ಫರಿಸಾಯರು ಏನು ಮಾಡುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಆ ಸ್ಥಳವನ್ನು ಬಿಟ್ಟುಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿದರು. ಆತನು ಎಲ್ಲಾ ರೋಗಿಗಳನ್ನು ಗುಣಪಡಿಸಿದನು.


ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.


ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.


ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್‌ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಆದ್ದರಿಂದ ವಿಶ್ವಾಸಿಗಳು ಪೌಲನನ್ನು ಸಮುದ್ರತೀರಕ್ಕೆ ಆ ಕೂಡಲೇ ಕಳುಹಿಸಿದರು. ಆದರೆ ಸೀಲ ತಿಮೊಥೆಯರು ಬೆರೋಯದಲ್ಲಿ ಉಳಿದುಕೊಂಡರು.


ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.


“ಆತನೇ ಕ್ರಿಸ್ತನು” ಎಂದು ಇನ್ನು ಕೆಲವರು ಹೇಳಿದರು. ಮತ್ತೆ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದಿಲ್ಲ.


ಆದರೆ ತಾನು ಯಾರೆಂಬುದನ್ನು ಬೇರೆ ಜನರಿಗೆ ಹೇಳಬಾರದೆಂದು ಆತನು ಜನರನ್ನು ಎಚ್ಚರಿಸಿದನು.


ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.


ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ.


ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು