Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:8 - ಪರಿಶುದ್ದ ಬೈಬಲ್‌

8 ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್‌ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ ಯೆರೂಸಲೇವಿುನಿಂದಲೂ ಇದೂಮಾಯದಿಂದಲೂ ಯೊರ್ದನ್ ಹೊಳೆಯ ಆಚೆಯಿಂದಲೂ ತೂರ್ ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಗಾಲಿಲಿಯಾ, ಜುದೆಯಾ, ಅನಿ ಇದುಮೆಯಾ, ಮನ್ತಲ್ಯಾ ಪ್ರಾಂತ್ಯಾನಿತ್ನಾ, ಜೆರುಜಲೆಮ್, ಮನ್ತಲ್ಯಾ ಶಾರಾತ್ನಾ, ಅನಿ ಜೊರ್ದಾನ್ ನ್ಹಯ್ಚ್ಯಾ ತಿಕುಲ್ಲ್ಯಾ ಬಾಜುಕ್ನಾ, ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂಚ್ಯಾ ಅಜು-ಬಾಜುಚ್ಯಾ ಗಾವಾನಿತ್ನಾ, ಜೆಜುನ್ ಕರಲ್ಲ್ಯಾ ಬರ್‍ಯಾ ಕಾಮಾಂಚಿ ಖಬರ್ ಆಯ್ಕುನ್, ಹಿ ಲೊಕಾ ಥೈ ಯೆವ್ನ್ ಗೊಳಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:8
18 ತಿಳಿವುಗಳ ಹೋಲಿಕೆ  

ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವೆ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವೆ.”


ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.


“ಆಕಾಶದಲ್ಲಿರುವ ನನ್ನ ಖಡ್ಗವು ರಕ್ತದಲ್ಲಿ ಮುಳುಗಿದಾಗ ಇವೆಲ್ಲಾ ಸಂಭವಿಸುವದು” ಎಂದು ಯೆಹೋವನು ಅನ್ನುತ್ತಾನೆ. ಯೆಹೋವನ ಖಡ್ಗವು ಎದೋಮನ್ನು ತುಂಡರಿಸುವುದು. ಆತನು ಆ ಜನರನ್ನು ದೋಷಿಗಳೆಂದು ನ್ಯಾಯತೀರಿಸಿದ್ದಾನೆ. ಆದ್ದರಿಂದ ಅವರು ಸಾಯಬೇಕು.


ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.


ದೇವಜನರು ಪ್ರಪಂಚದ ಅನೇಕ ಕಡೆಗಳಲ್ಲಿ ಈಗ ವಾಸವಾಗಿದ್ದಾರೆ. ಅವರಲ್ಲಿ ಕೆಲವರು ಈಜಿಪ್ಟಿನಲ್ಲಿಯೂ ಬಾಬಿಲೋನಿನಲ್ಲಿಯೂ ನೆಲೆಸಿದ್ದಾರೆ. ಇನ್ನು ಕೆಲವರು ಫಿಲಿಷ್ಟಿಯದಲ್ಲಿಯೂ ತೂರಿನಲ್ಲಿಯೂ ಇಥಿಯೋಪಿಯದಲ್ಲಿಯೂ ನೆಲೆಸಿದ್ದಾರೆ.


ತೂರ್ ಪಟ್ಟಣದ ಶ್ರೀಮಂತರು ನಿನ್ನನ್ನು ಸಂಧಿಸಲು ನಿನಗಾಗಿ ಉಡುಗೊರೆಗಳನ್ನು ತರುವರು.


ನಂತರ ಯೇಸು ಟೈರ್ ಪಟ್ಟಣದ ಆ ಪ್ರದೇಶವನ್ನು ಬಿಟ್ಟು ಸಿದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲಾಯ ಸರೋವರಕ್ಕೆ ಹೋದನು.


ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಆ ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಆ ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.


ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಈ ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಆ ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್,


ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.


ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು