Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 3:9 - ಪರಿಶುದ್ದ ಬೈಬಲ್‌

9 ಯೇಸು ಈ ಜನಸಮೂಹವನ್ನು ನೋಡಿ ಅವರು ತನ್ನ ಮೈಮೇಲೆ ಬಿದ್ದು ನೂಕಬಹುದೆಂದು ತನಗಾಗಿ ಒಂದು ಚಿಕ್ಕ ದೋಣಿಯನ್ನು ತಂದು ಅದನ್ನು ಸಿದ್ದಪಡಿಸುವಂತೆ ತನ್ನ ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನರು ಗುಂಪಾಗಿದ್ದದರಿಂದ ಮೈಮೇಲೆ ಬಿದ್ದು ನೂಕಾರೆಂದು ಆತನು ತನಗೆ ಒಂದು ದೋಣಿಯು ಸಿದ್ಧವಾಗಿರಲಿ ಎಂಬದಾಗಿ ಶಿಷ್ಯರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಮುಂದರಾಚ್ಯಾ ದಂಡೆಕ್ ಜೆಜು ಲೊಕಾಕ್ನಿ ಸಿಕ್ವುತಲೆ ಜೆಜು ಹಿ ಲೊಕಾ ಅಪ್ನಾಚ್ಯಾ ಆಂಗಾರ್ ಪಡುನ್ ಮಾಕಾ ಹಿಚಕ್ತಿಲ್, ಮನುನ್ ಅಪ್ನಾಚ್ಯಾ ಶಿಸಾಕ್ನಿ, ಅಪ್ನಾಕ್ ಬಸುಕ್ ಎಕ್ ಢೊನ್ ಹಾನುನ್, ತಯಾರ್ ಕರುನ್ ಥವ್ಕ್ ಲಾವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 3:9
9 ತಿಳಿವುಗಳ ಹೋಲಿಕೆ  

ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು.


ತನ್ನಿಂದ ಶಕ್ತಿಯು ಹೊರಟದ್ದು ಸಹ ಯೇಸುವಿಗೆ ತಿಳಿಯಿತು. ಆತನು ಅಲ್ಲೇ ನಿಂತು ಹಿಂತಿರುಗಿ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದನು.


ಬಳಿಕ ಯೇಸು ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಅವರಿಗೆ ಹೇಳಿ ಕಳುಹಿಸಿದನು. ಅನಂತರ ದೋಣಿಯನ್ನು ಹತ್ತಿ ಮಗದಾನ್ ಎಂಬ ಪ್ರಾಂತ್ಯಕ್ಕೆ ಹೋದನು.


ಮತ್ತೊಂದು ಸಮಯದಲ್ಲಿ ಯೇಸು ಸರೋವರದ ತೀರದಲ್ಲಿ ಉಪದೇಶಿಸಲಾರಂಭಿಸಿದನು. ಅನೇಕಾನೇಕ ಜನರು ಆತನ ಸುತ್ತಲೂ ಸೇರಿದರು. ಯೇಸು ಒಂದು ದೋಣಿಯೊಳಕ್ಕೆ ಹೋಗಿ ಕುಳಿತು ಸರೋವರದ ದಡದಿಂದ ಸ್ವಲ್ಪದೂರ ಹೋದನು. ಜನರೆಲ್ಲರೂ ಸರೋವರದ ದಡದ ಮೇಲಿದ್ದರು.


ಯೇಸು ಮತ್ತು ಆತನ ಶಿಷ್ಯರು ಅಲ್ಲಿದ್ದ ಜನರನ್ನು ಅಲ್ಲಿಯೇ ಬಿಟ್ಟುಹೋದರು. ಯೇಸು ಕುಳಿತುಕೊಂಡು ಉಪದೇಶಿಸುತ್ತಿದ್ದ ದೋಣಿಯಲ್ಲಿಯೇ ಅವರು ಹೋದರು. ಅವರೊಂದಿಗೆ ಬೇರೆ ದೋಣಿಗಳೂ ಇದ್ದವು.


ಯೇಸು ದೋಣಿಯಿಂದ ಹೊರಕ್ಕೆ ಬಂದಾಗ, ಒಬ್ಬ ಮನುಷ್ಯನು ಸಮಾಧಿಯ ಗವಿಗಳಿಂದ ಆತನ ಬಳಿಗೆ ಬಂದನು. ಅವನಿಗೆ ದೆವ್ವಹಿಡಿದಿತ್ತು.


ಆದ್ದರಿಂದ ಯೇಸು ಮತ್ತು ಆತನ ಶಿಷ್ಯರು ಜನರಿಲ್ಲದ ಸ್ಥಳಕ್ಕೆ ದೋಣಿಯಲ್ಲಿ ಪ್ರತ್ಯೇಕವಾಗಿ ಹೊರಟರು.


ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.


ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು