Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:35 - ಪರಿಶುದ್ದ ಬೈಬಲ್‌

35 ಆ ದಿನ ಸಂಜೆ, ಯೇಸು ತನ್ನ ಶಿಷ್ಯರಿಗೆ “ನನ್ನೊಂದಿಗೆ ಬನ್ನಿ, ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆದಡಕ್ಕೆ ಹೋಗೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆ ಹೊತ್ತು ಸಾಯಂಕಾಲವಾದಾಗ ಆತನು ಅವರಿಗೆ - ಆಚೇದಡಕ್ಕೆ ಹೋಗೋಣ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತ್ಯಾ ದಿಸ್, ಸಾಂಜ್ ಹೊತಾನಾ, ಜೆಜುನ್ ಅಪ್ಲ್ಯಾ ಶಿಸಾಕ್ನಿ“ಅಮಿ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಜಾಂವಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:35
11 ತಿಳಿವುಗಳ ಹೋಲಿಕೆ  

ಯೇಸು ತನ್ನ ಸುತ್ತಲೂ ಇದ್ದ ಜನರೆಲ್ಲರನ್ನು ನೋಡಿ ತನ್ನ ಶಿಷ್ಯರಿಗೆ ಸರೋವರದ ಆಚೆಯ ತೀರಕ್ಕೆ ಹೋಗುವಂತೆ ಹೇಳಿದನು.


ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಒಂದು ದಿನ ಯೇಸು ಮತ್ತು ಆತನ ಶಿಷ್ಯರು ದೋಣಿಯಲ್ಲಿ ಹತ್ತಿ ಕುಳಿತುಕೊಂಡರು. ಯೇಸು ಅವರಿಗೆ, “ನಾವು ಸರೋವರದ ಆಚೆದಡಕ್ಕೆ ಹೋಗೋಣ” ಎಂದು ಹೇಳಿದನು. ಅಂತೆಯೇ ಅವರು ಆಚೆದಡಕ್ಕೆ ಹೊರಟರು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.


ನಂತರ ಯೇಸು ಫರಿಸಾಯರ ಬಳಿಯಿಂದ ಹೊರಟು ದೋಣಿಯಲ್ಲಿ ಸರೋವರದ ಆಚೆಯ ದಡಕ್ಕೆ ಹೋದನು.


ಜನರು ಯೇಸುವನ್ನು ಸರೋವರದ ಆಚೆಯ ದಡದಲ್ಲಿ ಕಂಡುಕೊಂಡರು. ಅವರು ಆತನಿಗೆ, “ಗುರುವೇ, ನೀನು ಇಲ್ಲಿಗೆ ಯಾವಾಗ ಬಂದೆ?” ಎಂದು ಕೇಳಿದರು.


ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ. ಆದ್ದರಿಂದ ಶಿಷ್ಯರು ದೋಣಿಯನ್ನು ಹತ್ತಿ ಸರೋವರದ ಆಚೆಯ ಕಡೆಯಿದ್ದ ಕಪೆರ್ನೌಮಿಗೆ ಹೊರಟರು.


ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು.


ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.


ಯೇಸು ದೋಣಿಯಲ್ಲಿ ಸರೋವರದ ಆಚೆ ದಡಕ್ಕೆ ಹೋದನು. ಸರೋವರದ ತೀರದಲ್ಲಿ ಅನೇಕ ಜನರು ಆತನ ಸುತ್ತಲೂ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು