Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:39 - ಪರಿಶುದ್ದ ಬೈಬಲ್‌

39 ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜೆಜುನ್ ಉಟುನ್, ವಾರ್ಯಾಕ್ ಆಜ್ಞಾ ಕರುನ್ “ಗಪ್ ರ್‍ಹಾಮ್!” ಮಟ್ಲ್ಯಾನ್. ಅನಿ ಸಮುಂದರಾಚ್ಯಾ ಲ್ಹಾಟಾಕ್ನಿ “ಹಾಲುನಕಾಸಿ!” ಮಟ್ಲ್ಯಾನ್. ತನ್ನಾ ತೊ ಮೊಟೊ ವಾರೊ ಬಂದ್ ಹೊಲೊ. ಅನಿ ಸಗ್ಳೆ ಶಾಂತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:39
21 ತಿಳಿವುಗಳ ಹೋಲಿಕೆ  

ಆತನು ಬಿರುಗಾಳಿಯನ್ನು ನಿಲ್ಲಿಸಿ ಅಲೆಗಳನ್ನು ಶಾಂತಗೊಳಿಸಿದನು.


ಸಮುದ್ರವು ನಿನ್ನ ಅಧೀನದಲ್ಲಿದೆ. ಅದರ ರೋಷದ ಅಲೆಗಳನ್ನು ನೀನು ಶಾಂತಗೊಳಿಸುವೆ.


ಭೋರ್ಗರೆಯುವ ಸಮುದ್ರಗಳನ್ನೂ ಅನ್ಯಜನಾಂಗಗಳ ದಂಗೆಯನ್ನೂ ಶಾಂತಗೊಳಿಸುವಾತನು ದೇವರೇ.


ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.


ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.


ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು.


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.


ಇಸ್ರೇಲರು ಒಣನೆಲದ ಮೇಲೆ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.


ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ, “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.


ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.


ಯೇಸು ಆಕೆಯ ಬಳಿ ನಿಂತು, ಆಕೆಯನ್ನು ಬಿಟ್ಟುಹೋಗುವಂತೆ ಜ್ವರಕ್ಕೆ ಆಜ್ಞಾಪಿಸಿದನು. ಆ ಕೂಡಲೇ ಆಕೆಗೆ ಗುಣವಾಯಿತು. ಆಕೆ ಎದ್ದು ಅವರನ್ನು ಉಪಚರಿಸಿದಳು.


ಯೆಹೋವನು ಸಮುದ್ರಕ್ಕೆ ಗದರಿಸಿದಾಗ ಅದು ಒಣಗಿಹೋಗುವುದು. ಆತನು ಎಲ್ಲಾ ನದಿಗಳನ್ನು ಬತ್ತಿಸಿಬಿಡುವನು. ಕರ್ಮೆಲ್ ಮತ್ತು ಬಾಷಾನಿನ ಫಲವತ್ತಾದ ನೆಲಗಳು ಒಣಗಿ ಪಾಳುಬೀಳುವವು. ಲೆಬನೋನಿನ ಪುಷ್ಪವು ಬಾಡಿಹೋಗುವದು.


ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಯೇಸುವು ದೋಣಿಯ ಹಿಂಭಾಗದಲ್ಲಿ ತಲೆದಿಂಬಿನ ಮೇಲೆ ತಲೆಯನ್ನಿಟ್ಟು ನಿದ್ರಿಸುತ್ತಿದ್ದನು. ಶಿಷ್ಯರು ಆತನ ಬಳಿಗೆ ಹೋಗಿ, ಆತನನ್ನು ಎಬ್ಬಿಸಿ, “ಗುರುವೇ, ನೀನು ನಮ್ಮ ಬಗ್ಗೆ ಚಿಂತಿಸುವುದಿಲ್ಲವೆ? ನಾವು ಮುಳುಗಿಹೋಗುತ್ತಿದ್ದೇವೆ!” ಎಂದರು.


ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.


ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು