Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:40 - ಪರಿಶುದ್ದ ಬೈಬಲ್‌

40 ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಜೆಜುನ್ ಅಪ್ಲ್ಯಾ ಶಿಸಾಕ್ನಿ “ತುಮಿ ಕಶ್ಯಾಕ್ ಭಿವ್‍ಲ್ಯಾಶಿ? ತುಮ್ಕಾ ಅಜುನ್ಬಿ ವಿಶ್ವಾಸ್‍ ನಾ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:40
10 ತಿಳಿವುಗಳ ಹೋಲಿಕೆ  

ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.


ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.


ಶಿಷ್ಯರು ಈ ವಿಷಯವನ್ನು ಚರ್ಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಅವರಿಗೆ, “ರೊಟ್ಟಿ ಇಲ್ಲವಲ್ಲಾ ಎಂಬ ವಿಷಯದಲ್ಲಿ ನೀವು ಮಾತಾಡಿಕೊಳ್ಳುತ್ತಿರುವುದೇಕೆ? ಅಲ್ಪ ವಿಶ್ವಾಸಿಗಳೇ,


ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!


ಮೃದುವಾಗಿರುವ ಆತನು ಹುಲ್ಲಿನ ಕಡ್ಡಿಯನ್ನೂ ತುಂಡುಮಾಡುವದಿಲ್ಲ. ಕಿಡಿ ಬೆಂಕಿಯನ್ನೂ ಆತನು ಆರಿಸನು. ಆತನು ನೀತಿಯಿಂದ ನ್ಯಾಯವಿಚಾರಣೆಮಾಡಿ ಸತ್ಯವನ್ನು ಕಂಡುಕೊಳ್ಳುವನು.


ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು