Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 4:41 - ಪರಿಶುದ್ದ ಬೈಬಲ್‌

41 ಶಿಷ್ಯರು ಬಹಳ ಭಯಪಟ್ಟು, “ಈತನು ಯಾರಿರಬಹುದು? ಗಾಳಿ ಮತ್ತು ನೀರು ಸಹ ಈತನ ಮಾತನ್ನು ಕೇಳುತ್ತವೆಯಲ್ಲಾ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ಲೈ ಭಿಂವ್ನ್ ಗೆಲ್ಲೆ, ಅನಿ ಎಕಾಮೆಕಾಕ್ “ಹ್ಯೊ ಮಾನುಸ್ ಕೊನ್? ವಾರೊ ಅನಿ ಲ್ಹಾಟಾಸೈತ್ ಹೆನಿ ಸಾಂಗಟಲ್ಲೆ ಅಯಿಕ್ತ್ಯಾತ್!”ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 4:41
17 ತಿಳಿವುಗಳ ಹೋಲಿಕೆ  

ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.


ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.


ದೇವರು ಪರಿಶುದ್ಧರ ಸಭೆ ಸೇರಿಸುವನು. ಆ ದೇವದೂತರೆಲ್ಲಾ ಆತನ ಸುತ್ತಲೂ ಸೇರಿಬರುವರು. ಅವರು ದೇವರಲ್ಲಿ ಭಯಭಕ್ತಿಯಿಂದಿರುವರು. ಆತನಿಗೆ ಭಯಪಡುತ್ತಾ ಆತನ ಸನ್ನಿಧಿಯಲ್ಲಿ ನಿಂತುಕೊಳ್ಳುವರು.


ಆದರೆ ನೀವು ಯೆಹೋವನನ್ನು ಗೌರವಿಸಬೇಕು. ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವನ ಸೇವೆಯನ್ನು ನಿಜವಾಗಿಯೂ ಮಾಡಬೇಕು. ಆತನು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೆನಸಿಕೊಳ್ಳಿರಿ.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ತನಗೆ ಗುಣವಾಯಿತೆಂಬುದು ಆ ಸ್ತ್ರೀಗೆ ತಿಳಿದಿತ್ತು. ಆದ್ದರಿಂದ ಆಕೆ ಬಂದು, ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ಹೇಳಿದಳು.


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.


ಪೇತ್ರನು ಮತ್ತು ಯೇಸು ದೋಣಿ ಹತ್ತಿದ ಮೇಲೆ ಗಾಳಿ ಶಾಂತವಾಯಿತು.


ಯೆಹೋವನು ಹೀಗೆನ್ನುತ್ತಾನೆ, “ಆ ಒಡಂಬಡಿಕೆಯನ್ನು ನಾನು ಲೇವಿಯರೊಂದಿಗೆ ಮಾಡಿದೆನು. ನಾನು ಅವನಿಗೆ ಜೀವ ಮತ್ತು ಸಮಾಧಾನವನ್ನು ವಾಗ್ದಾನ ಮಾಡಿ ಅವನಿಗೆ ಅದನ್ನು ಕೊಟ್ಟೆನು. ಲೇವಿಯು ನನ್ನನ್ನು ಘನಪಡಿಸಿದನು. ನನ್ನ ಹೆಸರನ್ನು ಗೌರವಿಸಿದನು.


ಜನರು ನಿಜವಾಗಿಯೂ ಅತ್ಯಾಶ್ಚರ್ಯಗೊಂಡು, “ಯೇಸು ಎಲ್ಲವನ್ನೂ ಒಳ್ಳೆಯ ರೀತಿಯಲ್ಲಿ ಮಾಡುತ್ತಾನೆ. ಆತನು ಕಿವುಡರಿಗೆ ಕಿವಿ ಕೇಳಿಸುವಂತೆ ಮಾಡುತ್ತಾನೆ. ಮೂಕರು ಮಾತಾಡುವಂತೆ ಮಾಡುತ್ತಾನೆ” ಎಂದು ಹೇಳಿದರು.


ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.


ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಗೆರಸೇನರ ಪ್ರಾಂತ್ಯಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು