Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:23 - ಪರಿಶುದ್ದ ಬೈಬಲ್‌

23 “ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನನ್ನ ಚಿಕ್ಕ ಮಗಳು ಈಗ ಸಾಯುತ್ತಾಳೆ; ಆಕೆಯು ವಾಸಿಯಾಗಿ ಬದುಕಿಕೊಳ್ಳುವಂತೆ ನೀನು ಬಂದು ಆಕೆಯ ಮೇಲೆ ಕೈಯಿಡಬೇಕು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅನಿ “ಮಾಜಿ ಅಪುರ್ಬಾಯೆಚಿ ಲೆಕ್ ಶಿಕ್ ಹಾಯ್, ದಯಾ ಕರುನ್ ತಿಯಾ ಯೆವ್ನ್, ತಿಚ್ಯಾ ವರ್‍ತಿ ಹಾತ್ ಥವ್, ಹೆಚ್ಯಾನಿ, ತಿ ಬರಿ ಹೊತಾ, ಅನಿ ತಿ, ಹುರ್ತಾ” ಮನುನ್ ಲೈ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:23
26 ತಿಳಿವುಗಳ ಹೋಲಿಕೆ  

ಯೇಸು ಆಕೆಯ ಮೇಲೆ ತನ್ನ ಕೈಗಳನ್ನಿಟ್ಟಾಗ ಆಕೆ ನೆಟ್ಟಗೆ ನಿಲ್ಲಲು ಶಕ್ತಳಾದಳು. ಆಕೆ ದೇವರನ್ನು ಕೊಂಡಾಡಿದಳು.


ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.


ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.


ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು.


ಯೇಸು ಸಭಾಮಂದಿರದಿಂದ ಹೊರಟು ಸೀಮೋನನ ಮನೆಗೆ ಹೋದನು. ಸೀಮೋನನ ಅತ್ತೆ ಬಹಳ ಜ್ವರದಿಂದ ನರಳುತ್ತಿದ್ದಳು. ಆಕೆಗೆ ಸಹಾಯ ಮಾಡಬೇಕೆಂದು ಅಲ್ಲಿದ್ದವರು ಆತನನ್ನು ಬೇಡಿಕೊಂಡರು.


ಆಗ ಯೇಸು ಆ ಕುರುಡನ ಕೈ ಹಿಡಿದುಕೊಂಡು, ಅವನನ್ನು ಊರಿನಿಂದ ಹೊರಕ್ಕೆ ಕರೆದುಕೊಂಡು ಹೋದನು. ನಂತರ ಯೇಸು ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಈಗ ನಿನಗೆ ಕಾಣುತ್ತದೆಯೋ?” ಎಂದು ಕೇಳಿದನು.


ಆತನು ಅಲ್ಲಿದ್ದಾಗ, ಕೆಲವರು ಕಿವುಡನೂ ತೊದಲನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ಕರೆದುತಂದು ಅವನ ಮೇಲೆ ಕೈಯಿಟ್ಟು ಗುಣಪಡಿಸಬೇಕೆಂದು ಬೇಡಿಕೊಂಡರು.


ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು.


ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಶಿಷ್ಯರು ಬಿಡುಗಡೆ ಮಾಡಿದರು ಮತ್ತು ಕಾಯಿಲೆಯ ಜನರಿಗೆ ಎಣ್ಣೆಯನ್ನು ಹಚ್ಚಿ ಗುಣಪಡಿಸಿದರು.


ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.


ಅವರು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ನಾಮಾನನು ಕೋಪಗೊಂಡು, “ಎಲೀಷನು ಕೊನೆಯ ಪಕ್ಷ ಬಂದು, ನನ್ನೆದುರು ನಿಂತು, ತನ್ನ ದೇವರಾದ ಯೆಹೋವನ ಹೆಸರಿನಲ್ಲಿ ನನ್ನನ್ನು ಕರೆಯುತ್ತಿದ್ದನೆಂದು ನಾನು ಭಾವಿಸಿದ್ದೆನು. ಅವನು ತನ್ನ ಕೈಗಳನ್ನು ನನ್ನ ದೇಹದ ಮೇಲೆ ಸವರಿ, ನನ್ನ ಕುಷ್ಠರೋಗವನ್ನು ಗುಣಪಡಿಸುವನೆಂದು ನಾನು ಭಾವಿಸಿದ್ದೆನು.


ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.


ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.


ಯೇಸು ಅಧಿಕಾರಿಯೊಂದಿಗೆ ಹೋದನು. ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಅವರು ಆತನ ಸುತ್ತಲೂ ನೂಕುತ್ತಾ ಹೋದರು.


ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು.


ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು