Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 5:27 - ಪರಿಶುದ್ದ ಬೈಬಲ್‌

27 ಆಕೆಗೆ ಯೇಸುವನ್ನು ಕುರಿತು ತಿಳಿದುಬಂತು. ಆದ್ದರಿಂದ ಆಕೆಯು ಜನರ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಮೇಲಂಗಿಯನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27-28 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27-28 ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿ - ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಆಲೋಚಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಿಕಾ ಜೆಜುಚ್ಯಾ ವಿಶಯಾತ್ ಖಬರ್ ಗಾವ್ಲಿ, ಅನಿ ತಿ ಮಿಯಾ ತೆಜೆ ಕಪ್ಡೆ ಅಪಡ್ಲ್ಯಾರ್ ಫಿರೆ ಆರಾಮ್ ಹೊತಾ ಮನುನ್ ಚಿಂತುನ್ , ತೆಚ್ಯಾ ಫಾಟ್ನಾ ಹೊತ್ತ್ಯಾ ತಾಂಡ್ಯಾತ್ ಯೆವ್ನ್ ಗುಸ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 5:27
7 ತಿಳಿವುಗಳ ಹೋಲಿಕೆ  

ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.


ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.


ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.


ಯೇಸು ಆ ಪ್ರದೇಶದಲ್ಲಿದ್ದ ಪಟ್ಟಣಗಳಿಗೆ, ನಗರಗಳಿಗೆ ಮತ್ತು ತೋಟಗಳಿಗೆ ಹೋದನು. ಆತನು ಹೋದ ಕಡೆಗಳಲ್ಲೆಲ್ಲಾ ಜನರು ಮಾರುಕಟ್ಟೆಯ ಸ್ಥಳಗಳಿಗೆ ಕಾಯಿಲೆಯ ಜನರನ್ನು ಕರೆತಂದರು. ಅವರು ಯೇಸುವಿಗೆ, ನಿನ್ನ ಮೇಲಂಗಿಯ ಅಂಚನ್ನಾದರೂ ಮುಟ್ಟಲು ತಮಗೆ ಅವಕಾಶ ಕೊಡಬೇಕೆಂದು ಬೇಡಿಕೊಂಡರು. ಆತನನ್ನು ಸ್ಪರ್ಶಿಸಿದ ಜನರೆಲ್ಲರಿಗೂ ಗುಣವಾಯಿತು.


ಇಸ್ರೇಲರಲ್ಲಿ ಕೆಲವರು ಸತ್ತವನೊಬ್ಬನನ್ನು ಸಮಾಧಿ ಮಾಡುತ್ತಿರುವಾಗ ಸೈನಿಕರ ಆ ಗುಂಪನ್ನು ನೋಡಿ ಸತ್ತವನನ್ನು ಎಲೀಷನ ಸಮಾಧಿಯಲ್ಲಿ ಎಸೆದು ಓಡಿಹೋದರು. ಎಲೀಷನ ಮೂಳೆಗಳನ್ನು ಸತ್ತವನು ಸ್ಪರ್ಶಿಸಿದ ತಕ್ಷಣ, ಸತ್ತ ಮನುಷ್ಯನಿಗೆ ಜೀವ ಬಂದು, ಅವನು ತನ್ನ ಕಾಲುಗಳ ಮೇಲೆ ನಿಂತುಕೊಂಡನು!


ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.


ಆ ಸ್ತ್ರೀಯು, “ಆತನ ಉಡುಪನ್ನು ಮುಟ್ಟಿದರೆ ಸಾಕು ನಾನು ಗುಣಮುಖಳಾಗುತ್ತೇನೆ” ಎಂದುಕೊಂಡದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು