Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:21 - ಪರಿಶುದ್ದ ಬೈಬಲ್‌

21 ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಳಗಿನಿಂದ ಅಂದರೆ ಮನುಷ್ಯರ ಮನಸ್ಸಿನೊಳಗಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಎಕಾ ಮಾನ್ಸಾಚ್ಯಾ, ಕಾಳ್ಜಾತ್ ಹಿ ಸಗ್ಳಿ ಬುರ್ಶಿ ಕಾಮಾ ಉಪಾಜ್ತ್ಯಾತ್ ಅನಿ ತೆಕಾ ಬುರ್ಶಿ ಕಾಮಾ ಕರುಕ್ ಉತ್ತೆಜನ್ ಕರ್‍ತ್ಯಾತ್. ತಿ ಖಲಿ ಕಾಮಾ ಮಟ್ಲ್ಯಾರ್, ಬುರ್ಶಿ ಯೆವ್ಜನ್ಯಾ, ರಾಂಡ್ಗೆಪಾನ್, ಚೊರಿ ಕರ್‍ತಲೆ, ಜಿವಾನಿ ಮಾರ್‍ತಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:21
37 ತಿಳಿವುಗಳ ಹೋಲಿಕೆ  

“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.


ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ಆ ಸಮಯದಲ್ಲಿ ನಿನ್ನ ಮನಸ್ಸಿಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನ್ನು ಮಾಡುವಿ.


ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಅವರು ತಮ್ಮ ಕಾಲುಗಳಿಂದ ಓಡುತ್ತಾ ದುಷ್ಕೃತ್ಯಗಳನ್ನು ಮಾಡುವರು; ನಿರಪರಾಧಿಗಳನ್ನು ಕೊಲ್ಲಲು ಆತುರಪಡುವರು. ಅವರ ಆಲೋಚನೆಯು ಕೆಟ್ಟದ್ದೇ. ದೊಂಬಿ, ಲೂಟಿಗಳೇ ಅವರ ಜೀವನಶೈಲಿಯಾಗಿವೆ.


ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!


ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.


ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.


ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು.


ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು.


ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.


ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.


“ಅಶುದ್ಧದಿಂದ ಶುದ್ಧವು ಉಂಟಾದೀತೇ? ಎಂದಿಗೂ ಇಲ್ಲ.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕೃತ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಆ ಪಾಪಕೃತ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.


ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಐಶ್ವರ್ಯದ ಮೇಲೆ ಮನಸ್ಸಿಡದೆ ನಿನ್ನ ಒಡಂಬಡಿಕೆಯ ಬಗ್ಗೆ ಧ್ಯಾನಿಸಲು ನನಗೆ ಸಹಾಯಮಾಡು.


ನಾವು ಪಾಪಮಾಡಿ ಯೆಹೋವನಿಂದ ದೂರ ಹೋಗಿದ್ದೇವೆ. ಆತನಿಂದ ದೂರವಾಗಿ ಆತನನ್ನು ತೊರೆದುಬಿಟ್ಟಿದ್ದೇವೆ. ನಾವು ದುಷ್ಟತನವನ್ನೂ ದೇವರಿಗೆ ವಿರುದ್ಧವಾದ ಕಾರ್ಯಗಳನ್ನೂ ಆಲೋಚಿಸಿದ್ದೇವೆ. ನಮ್ಮ ಹೃದಯಗಳಲ್ಲಿ ದುಷ್ಟಯೋಜನೆಗಳನ್ನು ಹಾಕಿರುತ್ತೇವೆ.


ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನ್ನು ಮಾಡಿದ್ದೀರಿ. ನೀವು ಬಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಬಂದಂತೆ ಮಾಡುತ್ತಿದ್ದೀರಿ. ನೀವು ನನ್ನ ಆಜ್ಞೆಯನ್ನು ಪಾಲಿಸುತ್ತಿಲ್ಲ.


ಇದಲ್ಲದೆ ಯೇಸು ಅವರಿಗೆ, “ಒಬ್ಬ ಮನುಷ್ಯನಿಂದ ಹೊರಬರುವ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.


ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು