Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:27 - ಪರಿಶುದ್ದ ಬೈಬಲ್‌

27 ಯೇಸು ಆ ಸ್ತ್ರೀಗೆ, “ಮಕ್ಕಳಿಗೆ ಕೊಡುವ ರೊಟ್ಟಿಯನ್ನು ತೆಗೆದುಕೊಂಡು ನಾಯಿಗಳಿಗೆ ಕೊಡುವುದು ಸರಿಯಲ್ಲ. ತಮಗೆ ಬೇಕಾದುದನ್ನು ಮಕ್ಕಳು ಮೊದಲು ತಿನ್ನಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕೆಯು ತನ್ನ ಮಗಳ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ ಆತನು ಆಕೆಗೆ - ಮಕ್ಕಳಿಗೆ ಮೊದಲು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತಕ್ಕೊಂಡು ನಾಯಿಮರಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೇಸು ಆಕೆಗೆ, “ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಜೆಜುನ್ “ಪೊರಾಕ್ನಿ ದಿತಲಿ ಭಾಕ್ರಿ ಕುತ್ರ್ಯಾಕ್ನಿ ತಾಕ್ತಲೆ ಸಮಾ ನ್ಹಯ್, ಅದ್ದಿ ಪೊರಾ ಖಾಂವ್ದಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:27
8 ತಿಳಿವುಗಳ ಹೋಲಿಕೆ  

“ಆದರೆ ಯೇಸು ನನಗೆ, ‘ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು’ ಎಂದು ಹೇಳಿದನು.”


ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.


“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳು ಸತ್ಯವಾದುವುಗಳೆಂದು ತೋರಿಸುವುದಕ್ಕಾಗಿಯೂ ದೇವರು ಆ ವಾಗ್ದಾನಗಳನ್ನು ನೆರವೇರಿಸುತ್ತಾನೆ ಎಂಬುದನ್ನು ನಿರೂಪಿಸುವುದಕ್ಕಾಗಿಯೂ


ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು.


ಆ ಸ್ತ್ರೀಯು, “ಅದು ನಿಜ ಪ್ರಭು. ಆದರೆ ಮಕ್ಕಳು ತಿನ್ನದೆ ಬಿಟ್ಟ ಆಹಾರದ ಚೂರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನಬಹುದಲ್ಲವೇ?” ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು