Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:34 - ಪರಿಶುದ್ದ ಬೈಬಲ್‌

34 ಬಳಿಕ ಆಕಾಶದ ಕಡೆಗೆ ನೋಡಿ, ನಿಟ್ಟುಸಿರು ಬಿಟ್ಟು, “ಎಪ್ಫಥಾ” ಎಂದು ಹೇಳಿದನು. (ಎಪ್ಫಥಾ ಎಂದರೆ “ತೆರೆಯಲಿ”)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವನ ನಾಲಿಗೆಯನ್ನು ಮುಟ್ಟಿ ಆಕಾಶದ ಕಡೆಗೆ ನೋಡಿ ನಿಟ್ಟುಸುರು ಬಿಟ್ಟು ಅವನಿಗೆ - ಎಪ್ಫಥಾ ಎಂದು ಹೇಳಿದನು. ಆ ಶಬ್ದಕ್ಕೆ ತೆರೆಯಲಿ ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಸರ್‍ಗಾಕ್ ದಿಸ್ಟ್ ಲಾವುನ್ ಉಸ್ಕಾರುನ್ “ಎಫ್ಫತಾ” ಮಟ್ಲ್ಯಾನ್ ಮಟ್ಲ್ಯಾರ್ ಉಗಡ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:34
21 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಯೇಸು ಐದು ರೊಟ್ಟಿಗಳನ್ನು ಮತ್ತು ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ, ರೊಟ್ಟಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದನು. ಬಳಿಕ ರೊಟ್ಟಿಯನ್ನು ಮುರಿದು, ಅದನ್ನು ಶಿಷ್ಯರಿಗೆ ಕೊಟ್ಟು ಜನರಿಗೆಲ್ಲ ಹಂಚಲು ತಿಳಿಸಿದನು. ಅಂತೆಯೇ ಎರಡು ಮೀನುಗಳನ್ನು ಮುರಿದು ಜನರಿಗೆ ಹಂಚಬೇಕೆಂದು ಶಿಷ್ಯರಿಗೆ ಕೊಟ್ಟನು.


ಯೇಸು ಆ ಬಾಲಕಿಯ ಕೈ ಹಿಡಿದು, ಅವಳಿಗೆ, “ತಲಿಥಾ ಕೂಮ್!” ಎಂದು ಹೇಳಿದನು. (ಅಂದರೆ “ಚಿಕ್ಕ ಹುಡುಗಿಯೇ, ಎದ್ದೇಳು ಎಂದು ನಾನು ಹೇಳುತ್ತಿದ್ದೇನೆ” ಎಂದರ್ಥ.)


ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.


ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು.


ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?” ಎಂಬುದೇ ಇದರರ್ಥ.


ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.


ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಬಳಿಕ ಯೇಸು ಗಟ್ಟಿಯಾದ ಧ್ವನಿಯಿಂದ, “ಲಾಜರನೇ, ಹೊರಗೆ ಬಾ!” ಎಂದು ಕರೆದನು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.


ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.


ಯೇಸು ಕಣ್ಣೀರಿಟ್ಟನು.


ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು


ಯೇಸು ಅವನಿಗೆ, “ನೀನು ನಂಬಿದ್ದರಿಂದಲೇ ನಿನಗೆ ವಾಸಿಯಾಯಿತು” ಎಂದು ಹೇಳಿದನು.


ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.


ಯೇಸು ಅವನಿಗಾಗಿ ದುಃಖಪಟ್ಟು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಇಷ್ಟವಿದೆ. ನಿನಗೆ ಗುಣವಾಗಲಿ” ಎಂದು ಹೇಳಿದನು.


ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.


ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.


ಆಗ ಅವನ ಕಿವಿಗಳು ತೆರೆದವು. ನಾಲಿಗೆ ಸಡಿಲಗೊಂಡಿತು. ಅವನು ಸ್ಪಷ್ಟವಾಗಿ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು