Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 7:4 - ಪರಿಶುದ್ದ ಬೈಬಲ್‌

4 ಅವರು ಏನನ್ನಾದರೂ ಮಾರುಕಟ್ಟೆಯಲ್ಲಿ ಕೊಂಡುಕೊಂಡರೆ, ವಿಶೇಷವಾದ ರೀತಿಯಲ್ಲಿ ಅದನ್ನು ತೊಳೆಯದೆ ತಿನ್ನುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಇತರ ಆಚಾರಗಳನ್ನು ಅಂದರೆ ಲೋಟ, ಬಟ್ಟಲು, ತಪ್ಪಲೆ ಮತ್ತು ದೋಲಿಗಳನ್ನು ತೊಳೆಯುವಾಗಲೂ ಈ ನಿಯಮಗಳನ್ನು ಅನುಸರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಬಾಜಾರಾಕ್ನಾ ಖಾವ್ಕ್ ಹಾನಲ್ಲೆ ತರ್ ಧುಯ್ನಾಸ್ತಾನಾ ಖಾಯ್ನಸಿತ್. ವಾಟ್ಕಿ,ಗಾಡ್ಗಿ, ತಾಂಬ್ಯಾ, ಆಯ್ದಾನಾ, ಹಾತ್ರಾನಾ ಧುತಲೆ, ಅಸ್ಲಿ ಲೈ ಪದ್ದತಿಯಾ ಪಾಳಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 7:4
15 ತಿಳಿವುಗಳ ಹೋಲಿಕೆ  

ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.


ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


“ನಿಮ್ಮನ್ನು ಶುದ್ಧಿಮಾಡಿಕೊಳ್ಳಿರಿ; ಶುಚಿಪಡಿಸಿಕೊಳ್ಳಿರಿ. ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ; ಅವುಗಳನ್ನು ನೋಡಲು ನನಗೆ ಮನಸ್ಸಿಲ್ಲ. ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಿರಿ;


ದೇವರು ಬೆಳಕಿನಲ್ಲಿದ್ದಾನೆ. ಆದ್ದರಿಂದ ನಾವೂ ಬೆಳಕಿನಲ್ಲಿ ಜೀವಿಸಬೇಕಾಗಿದೆ. ನಾವು ಬೆಳಕಿನಲ್ಲಿ ಜೀವಿಸುವವರಾಗಿದ್ದರೆ ಪರಸ್ಪರ ಅನ್ಯೋನ್ಯತೆಯಲ್ಲಿದ್ದೇವೆ ಮತ್ತು ದೇವರ ಮಗನಾದ ಯೇಸುವಿನ ರಕ್ತವು ನಮ್ಮ ಪಾಪಗಳನ್ನೆಲ್ಲಾ ನಿವಾರಣೆ ಮಾಡುತ್ತದೆ.


ಜನರ ಮನಸ್ಸನ್ನು ಬದಲಾಯಿಸಲು ತನಗೆ ಸಾಧ್ಯವಿಲ್ಲವೆಂದೂ ಜನರು ಗಲಭೆ ಆರಂಭಿಸಲಿದ್ದಾರೆಂದೂ ತಿಳಿದುಕೊಂಡ ಪಿಲಾತನು ಸ್ವಲ್ಪ ನೀರನ್ನು ತೆಗೆದುಕೊಂಡು ಜನರೆಲ್ಲರ ಎದುರಿನಲ್ಲಿ ತನ್ನ ಕೈಗಳನ್ನು ತೊಳೆದುಕೊಳ್ಳುತ್ತಾ, “ಈ ಮನುಷ್ಯನ ಸಾವಿಗೆ ನಾನು ಜವಾಬ್ದಾರನಲ್ಲ. ಆತನನ್ನು ಶಿಲುಬೆಗೇರಿಸುತ್ತಿರುವವರು ನೀವೇ!” ಎಂದು ಹೇಳಿದನು.


ಯೆಹೋವನೇ, ನಾನು ನಿನ್ನ ಯಜ್ಞವೇದಿಕೆಯ ಸುತ್ತಲೂ ನಡೆಯಲು ನನ್ನ ಕೈಗಳನ್ನು ತೊಳೆದುಕೊಳ್ಳುತ್ತೇನೆ.


ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಮತ್ತೊಬ್ಬ ಯೆಹೂದ್ಯನಿಗೂ ಶುದ್ಧಾಚಾರದ ಬಗ್ಗೆ ವಾದವಾಯಿತು.


ಆಮೇಲೆ ನಾನು ದ್ರಾಕ್ಷಾರಸ ತುಂಬಿದ ಕೆಲವು ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ರೇಕಾಬ್ಯ ಕುಟುಂಬದವರ ಮುಂದಿಟ್ಟು, “ಸ್ವಲ್ಪ ದ್ರಾಕ್ಷಾರಸವನ್ನು ಕುಡಿಯಿರಿ” ಎಂದೆನು.


ಫರಿಸಾಯರೇ, ನೀವು ಕುರುಡರು! ಮೊದಲು ಬಟ್ಟಲಿನ ಒಳಭಾಗವನ್ನು ಚೆನ್ನಾಗಿ ಶುಚಿಮಾಡಿರಿ. ಆಗ ಬಟ್ಟಲಿನ ಹೊರಭಾಗವು ನಿಜವಾಗಿಯೂ ಶುಚಿಯಾಗಿರುವುದು.


ನೀವು ದೇವರ ಆಜ್ಞೆಗಳಿಗೆ ವಿಧೇಯರಾಗದೆ ಜನರ ಸಂಪ್ರದಾಯಗಳನ್ನು ಅನುಸರಿಸುತ್ತಿರುವಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು