Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:11 - ಪರಿಶುದ್ದ ಬೈಬಲ್‌

11 ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನನ್ನು ಪರೀಕ್ಷಿಸಲು ಪ್ರಶ್ನೆಗಳನ್ನು ಕೇಳಿದರು. ಅವರು ಯೇಸುವಿಗೆ, “ನೀನು ದೇವರಿಂದ ಬಂದವನೆಂದು ತೋರಿಸಲು ಒಂದು ಸೂಚಕಕಾರ್ಯವನ್ನು ಮಾಡು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ಫರಿಸಾಯರು ಹೊರಟು ಬಂದು ಆತನ ಕೂಡ ತರ್ಕಮಾಡುತ್ತಾ ಪರೀಕ್ಷಿಸುವದಕ್ಕಾಗಿ - ನೀನು ಆಕಾಶದಲ್ಲಿ ಒಂದು ಸೂಚಕಕಾರ್ಯವನ್ನು ತೋರಿಸಿಕೊಡಬೇಕೆಂದು ಕೇಳುತ್ತಿರಲು ಆತನು ತನ್ನ ಆತ್ಮದಲ್ಲಿ ನೊಂದು ನಿಟ್ಟುಸುರುಬಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಫರಿಸಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ಮಾಡಬೇಕೆಂದು ಕೇಳಿ, ಅವರೊಂದಿಗೆ ತರ್ಕಿಸುವುದಕ್ಕೆ ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಫಾರಿಜೆವ್ ಯೆಲೆ ಅನಿ ಕಾಯ್ತರ್ ಚುಕ್ ಹುಡ್ಕುಕ್ ಮನುನ್, ತಿಯಾ ದೆವಾಕ್ನಾ ಯೆಲ್ಲೊ ಮನುನ್ ದಾಕ್ವುಕ್ ಸರ್‍ಗಾ ವೈನಾ ಎಕ್ ಮೊಟೊ ವಳಕ್ ಕರುನ್ ದಾಕ್ವು ಮನುನ್ ತೆಚೆಕ್ಡೆ ವಾದ್ ಕರುಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:11
27 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಮಾಡಿದಂತೆ ನಾವು ಪ್ರಭುವನ್ನು ಪರೀಕ್ಷಿಸಬಾರದು. ಅದರ ಫಲವಾಗಿ ಅವರು ಹಾವುಗಳಿಂದ ಮರಣಹೊಂದಿದರು.


ಆಗ ಕೆಲವು ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿಗೆ, “ಬೋಧಕನೇ, ನೀನು ಹೇಳಿದ್ದನ್ನು ನಿರೂಪಿಸುವುದಕ್ಕಾಗಿ ಒಂದು ಸೂಚಕಕಾರ್ಯವನ್ನು ಮಾಡು” ಎಂದು ಹೇಳಿದರು.


ಗರ್ವಿಷ್ಟರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಟಜನರು ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ.


“ಮಸ್ಸಾದಲ್ಲಿ ನೀವು ನಿಮ್ಮ ದೇವರನ್ನು ಪರೀಕ್ಷಿಸಿದಂತೆ ಆತನನ್ನು ಪರೀಕ್ಷಿಸಬಾರದು.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ನೋಡದ ಹೊರತು ನನ್ನನ್ನು ನಂಬುವುದೇ ಇಲ್ಲ” ಎಂದು ಹೇಳಿದನು.


ಇತರ ಜನರು ಯೇಸುವನ್ನು ಪರೀಕ್ಷಿಸಬೇಕೆಂದು ದೇವರಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸು ಎಂದು ಕೇಳಿದರು.


ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.


ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ!


ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?


ಆಗ ಧರ್ಮೋಪದೇಶಕನೊಬ್ಬನು ಯೇಸುವನ್ನು ಪರೀಕ್ಷಿಸಲು ಎದ್ದುನಿಂತು, “ಬೋಧಕನೇ, ನಾನು ನಿತ್ಯಜೀವ ಹೊಂದಲು ಏನು ಮಾಡಬೇಕು?” ಎಂದು ಕೇಳಿದನು.


ಈ ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.


ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.


ಅದೇ ದಿನದಲ್ಲಿ ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದು, (ಯಾರಿಗೂ ಪುನರುತ್ಥಾನವಿಲ್ಲ ಎಂಬುದು ಸದ್ದುಕಾಯರ ನಂಬಿಕೆ.)


ಈ ಜನರ ಕುತಂತ್ರವು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ನೀವು ಕಪಟಿಗಳು! ನನ್ನನ್ನು ತಪ್ಪಿನಲ್ಲಿ ಸಿಕ್ಕಿಸಲು ಏಕೆ ಪ್ರಯತ್ನಿಸುತ್ತೀರಿ?


ಆಗ ಫರಿಸಾಯರು, ಅಲ್ಲಿಂದ ಹೊರಟುಹೋಗಿ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಉಪಾಯಗಳನ್ನು ಮಾಡಿಕೊಂಡರು.


ಯೇಸು ದೇವಾಲಯಕ್ಕೆ ಹೋದನು. ಯೇಸು ಅಲ್ಲಿ ಉಪದೇಶಿಸುತ್ತಿದ್ದಾಗ, ಮಹಾಯಾಜಕರು ಮತ್ತು ಜನರ ಹಿರಿಯ ನಾಯಕರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ತಿಳಿಸು!” ಎಂದರು.


ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ತಪ್ಪಿನಲ್ಲಿ ಸಿಕ್ಕಿಸುವುದಕ್ಕಾಗಿ, “ತನ್ನದೇ ಆದ ಯಾವ ಕಾರಣಕ್ಕಾಗಲಿ ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.


ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು. ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.


ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿದರೆ ಆತನ ಮೇಲೆ ಅಪವಾದ ಹೊರಿಸಲು ಸಾಧ್ಯವಾಗುತ್ತದೆ ಎಂದು ಈ ಪ್ರಶ್ನೆಯನ್ನು ಕೇಳಿದರು. ಆದರೆ ಯೇಸು ತಲೆ ಬಾಗಿಸಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆಯತೊಡಗಿದನು.


ಯೇಸು, “ನೀವು ಯಾವುದರ ಬಗ್ಗೆ ವಾದಿಸುತ್ತಿದ್ದೀರಿ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು