Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:13 - ಪರಿಶುದ್ದ ಬೈಬಲ್‌

13 ನಂತರ ಯೇಸು ಫರಿಸಾಯರ ಬಳಿಯಿಂದ ಹೊರಟು ದೋಣಿಯಲ್ಲಿ ಸರೋವರದ ಆಚೆಯ ದಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೇಸು ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೆದಡಕ್ಕೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ತೊ ಥೈತ್ನಾ ಢೊನಿತ್ ಚಡುನ್ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:13
15 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.


ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.


ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.


ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ಒಂದುವೇಳೆ ಇಸ್ರೇಲರಿಗೆ ಮಕ್ಕಳು ಹುಟ್ಟಿದರೂ ಪ್ರಯೋಜನವಿಲ್ಲ. ಯಾಕೆಂದರೆ ಆ ಮಕ್ಕಳನ್ನು ಅವರಿಂದ ತೆಗೆದುಬಿಡುವೆನು. ನಾನು ಅವರನ್ನು ತೊರೆದುಬಿಡುವೆನು. ಆಗ ಅವರಿಗೆ ಸಂಕಟದ ಮೇಲೆ ಸಂಕಟವು ಪ್ರಾಪ್ತಿಯಾಗುವದು.”


“ಅವನ ವಿಗ್ರಹಗಳೊಂದಿಗೆ ಎಫ್ರಾಯೀಮು ಸೇರಿರುತ್ತಾನೆ. ಆದ್ದರಿಂದ ಅವನನ್ನು ಸುಮ್ಮನೆ ಬಿಟ್ಟುಬಿಡು.


“ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’” ಎಂದು ಉತ್ತರಿಸು. ಇದು ಯೆಹೋವನ ನುಡಿ.


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ಆಗ ಯೇಸು ನಿಟ್ಟುಸಿರುಬಿಟ್ಟು ಅವರಿಗೆ, “ನೀವು ಸೂಚಕಕಾರ್ಯವನ್ನು ನೋಡಬಯಸುವುದೇಕೆ? ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮಗೆ ಯಾವ ಸೂಚಕಕಾರ್ಯವನ್ನೂ ತೋರಿಸಲಾಗುವುದಿಲ್ಲ” ಎಂದು ಹೇಳಿದನು.


ಶಿಷ್ಯರು ದೋಣಿಯಲ್ಲಿ ಹೋಗುತ್ತಿದ್ದಾಗ ಅವರ ಬಳಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು. ಅವರು ಮರೆತು ಹೆಚ್ಚು ರೊಟ್ಟಿಗಳನ್ನು ತಂದಿರಲಿಲ್ಲ.


ನಾವು ಹಡಗನ್ನು ಹತ್ತಿ ಅಲ್ಲಿಂದ ಹೊರಟೆವು. ಆ ಹಡಗು ಅದ್ರಮಿತ್ತಿ ಪಟ್ಟಣದಿಂದ ಬಂದಿತ್ತು ಮತ್ತು ಏಷ್ಯಾದ ಬೇರೆಬೇರೆ ಸ್ಥಳಗಳಿಗೆ ಹೋಗಲು ಸಿದ್ಧವಾಗಿತ್ತು. ಅರಿಸ್ತಾರ್ಕನು ನಮ್ಮೊಂದಿಗೆ ಬಂದನು. ಅವನು ಮಕೆದೋನಿಯಕ್ಕೆ ಸೇರಿದ ಥೆಸಲೋನಿಕ ಪಟ್ಟಣದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು