Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:2 - ಪರಿಶುದ್ದ ಬೈಬಲ್‌

2 “ನಾನು ಈ ಜನರಿಗಾಗಿ ಕನಿಕರಪಡುತ್ತೇನೆ. ಇವರು ಮೂರು ದಿನಗಳಿಂದ ನನ್ನ ಜೊತೆಯಲ್ಲಿದ್ದಾರೆ. ಇವರ ಬಳಿ ಊಟಕ್ಕೆ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಇವರು ನನ್ನ ಬಳಿಗೆ ಬಂದು ಮೂರು ದಿನವಾಯಿತು; ಇವರಿಗೆ ಊಟಕ್ಕೆ ಏನೂ ಇಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ಹ್ಯಾ ಲೊಕಾಕ್ನಿ ಬಗುನ್ ಮಾಕಾ ಪಾಪ್ ದಿಸುಕ್ ಲಾಗ್ಲಾ, ತಿನ್ ದಿಸಾ ಹೊಲಿ ಹಿ ಲೊಕಾ ಮಾಜ್ಯಾ ವಾಂಗ್ಡಾ ಹಾತ್, ತೆಂಚ್ಯಾಕ್ಡೆ ಜೆವ್ನಾಕ್ ಕಾಯ್ಬಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:2
23 ತಿಳಿವುಗಳ ಹೋಲಿಕೆ  

ನೋವಿನಿಂದ ನರಳುತ್ತಿದ್ದ ಮತ್ತು ಅಸಹಾಯಕರಾಗಿದ್ದ ಅನೇಕ ಜನರನ್ನು ಯೇಸು ನೋಡಿ ದುಃಖಪಟ್ಟನು. ಕುರುಬನಿಲ್ಲದ ಕುರಿಗಳಂತೆ ಅವರಿದ್ದರು.


ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.


ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನ ಭಕ್ತರನ್ನು ಕನಿಕರಿಸುವನು.


ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.


ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ


ಆಗಿಂದಾಗ್ಗೆ ದೆವ್ವವು ಅವನನ್ನು ಕೊಲ್ಲಲು ಬೆಂಕಿಯೊಳಗೆ ಅಥವಾ ನೀರಿನೊಳಗೆ ಎಸೆಯುತ್ತದೆ. ನಿನಗೆ ಸಾಧ್ಯವಿರುವುದಾದರೆ, ದಯವಿಟ್ಟು ನಮ್ಮ ಮೇಲೆ ಕರುಣೆಯಿಟ್ಟು ಸಹಾಯಮಾಡು” ಎಂದು ಉತ್ತರಿಸಿದನು.


ಯೇಸು ಅಲ್ಲಿಗೆ ಬಂದಾಗ, ಅನೇಕ ಜನರು ತನಗಾಗಿ ಕಾಯುತ್ತಿರುವುದನ್ನು ನೋಡಿದನು. ಅವರು ಕುರುಬನಿಲ್ಲದ ಕುರಿಗಳಂತೆ ಇರುವುದನ್ನು ಕಂಡು ದುಃಖಗೊಂಡು ಅವರಿಗೆ ಅನೇಕ ಸಂಗತಿಗಳನ್ನು ಉಪದೇಶಿಸಿದನು.


ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು.


ಯೇಸು ಅವನಿಗಾಗಿ ದುಃಖಪಟ್ಟು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಇಷ್ಟವಿದೆ. ನಿನಗೆ ಗುಣವಾಗಲಿ” ಎಂದು ಹೇಳಿದನು.


ಯೇಸು ಅವರಿಗಾಗಿ ದುಃಖಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರಿಗೆ ದೃಷ್ಟಿ ಬಂದಿತು. ಬಳಿಕ ಅವರು ಯೇಸುವನ್ನು ಹಿಂಬಾಲಿಸಿದರು.


ಯೇಸು ಅಲ್ಲಿಗೆ ಬಂದಾಗ, ಜನರು ಗುಂಪುಗುಂಪಾಗಿ ನೆರೆದಿರುವುದನ್ನು ಕಂಡು ಅವರಿಗಾಗಿ ದುಃಖಪಟ್ಟು ಕಾಯಿಲೆಯವರನ್ನು ಗುಣಪಡಿಸಿದನು.


ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಆದ್ದರಿಂದ ಯೇಸು ಮತ್ತು ಆತನ ಶಿಷ್ಯರು ಜನರಿಲ್ಲದ ಸ್ಥಳಕ್ಕೆ ದೋಣಿಯಲ್ಲಿ ಪ್ರತ್ಯೇಕವಾಗಿ ಹೊರಟರು.


ಇವರು ಏನನ್ನೂ ತಿನ್ನದೆ ಹಸಿವೆಯಲ್ಲಿಯೇ ಹೊರಟರೆ ದಾರಿಯಲ್ಲಿ ಬಳಲಿ ಹೋಗುವರು. ಈ ಜನರಲ್ಲಿ ಕೆಲವರು ಬಹಳ ದೂರದಿಂದ ಬಂದಿದ್ದಾರೆ” ಎಂದು ಹೇಳಿದನು.


ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿದ್ದೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು