Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 8:22 - ಪರಿಶುದ್ದ ಬೈಬಲ್‌

22 ಯೇಸು ಮತ್ತು ಆತನ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವು ಜನರು ಯೇಸುವಿನ ಬಳಿಗೆ ಒಬ್ಬ ಕುರುಡನನ್ನು ತಂದು ಅವನನ್ನು ಮುಟ್ಟಬೇಕೆಂದು ಯೇಸುವನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರಕೊಂಡುಬಂದು - ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜು ಅನಿ ತೆಚಿ ಶಿಸಾ ಬೆತ್ಸಾಯಿದಾ ಮನ್ತಲ್ಯಾ ಗಾವಾಕ್ ಯೆಲ್ಯಾನಿ.ಥೈ ಲೊಕಾನಿ ಎಕ್ ಕುಡ್ಡ್ಯಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ ಅನಿ ತೆಕಾ ಅಪಡ್ ಮನುನ್ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 8:22
14 ತಿಳಿವುಗಳ ಹೋಲಿಕೆ  

ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.


ಆಗ ಯೇಸು ತನ್ನ ಶಿಷ್ಯರಿಗೆ ದೋಣಿಯೊಳಕ್ಕೆ ಹೋಗಲು ತಿಳಿಸಿದನು. ಸರೋವರದ ಆಚೆಯ ದಡದಲ್ಲಿದ್ದ ಬೆತ್ಸಾಯಿದಕ್ಕೆ ಹೋಗಬೇಕೆಂತಲೂ ಸ್ವಲ್ಪ ಸಮಯದ ನಂತರ ತಾನು ಬರುವುದಾಗಿಯೂ ಯೇಸು ಅವರಿಗೆ ಹೇಳಿ ಅವರನ್ನು ಕಳುಹಿಸಿದನು. ತಮ್ಮತಮ್ಮ ಮನೆಗಳಿಗೆ ಹೋಗುವಂತೆ ಜನರಿಗೆ ತಿಳಿಸುವುದಕ್ಕಾಗಿ ಯೇಸು ಅಲ್ಲಿ ಉಳಿದುಕೊಂಡನು.


“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.


ಈ ಗ್ರೀಕ್ ಜನರು ಫಿಲಿಪ್ಪನ ಬಳಿಗೆ ಹೋದರು. (ಫಿಲಿಪ್ಪನು ಗಲಿಲಾಯದ ಬೆತ್ಸಾಯಿ ಎಂಬ ಊರಿನವನಾಗಿದ್ದವನು.) ಅವರು, “ಸ್ವಾಮೀ, ನಾವು ಯೇಸುವನ್ನು ನೋಡಬೇಕು” ಎಂದು ಅವನನ್ನು ಕೇಳಿಕೊಂಡರು.


ಅಂದ್ರೆಯ ಮತ್ತು ಪೇತ್ರರಂತೆ ಫಿಲಿಪ್ಪನು ಸಹ ಬೆತ್ಸಾಯಿದ ಎಂಬ ಊರಿನವನಾಗಿದ್ದನು.


ಕೆಲವು ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು. ಅವನನ್ನು ನಾಲ್ಕು ಮಂದಿ ಹೊತ್ತುಕೊಂಡಿದ್ದರು.


ಯೇಸು ಅವಳ ಕೈ ಮುಟ್ಟಿದಾಗ ಜ್ವರವು ಅವಳನ್ನು ಬಿಟ್ಟುಹೋಯಿತು. ಆಗ ಅವಳು ಮೇಲೆದ್ದು, ಆತನ ಸೇವೆಮಾಡಿದಳು.


ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ನಂಬಿದಂತೆಯೇ ನಿಮಗೆ ಗುಣವಾಗಲಿ” ಅಂದನು.


ಯೇಸು ಅವನನ್ನು ಮುಟ್ಟಿ, “ನಿನ್ನನ್ನು ಗುಣಪಡಿಸಲು ನನಗೆ ಮನಸ್ಸಿದೆ, ಗುಣವಾಗು” ಎಂದನು. ಆ ಕ್ಷಣವೇ ಅವನ ಕುಷ್ಠರೋಗ ವಾಸಿಯಾಯಿತು.


ಅಪೊಸ್ತಲರು ಸುವಾರ್ತಾ ಪ್ರಯಾಣದಿಂದ ಹಿಂತಿರುಗಿ ಬಂದು, ತಾವು ಮಾಡಿದ ಸಂಗತಿಗಳನ್ನು ಯೇಸುವಿಗೆ ತಿಳಿಸಿದರು. ಆಗ ಆತನು ಅವರನ್ನು ಬೆತ್ಸಾಯಿದ ಊರಿನ ಸಮೀಪಕ್ಕೆ ಪ್ರತ್ಯೇಕವಾಗಿ ಕರೆದುಕೊಂಡು ಹೋದನು. ಅಲ್ಲಿ ಯೇಸು ಮತ್ತು ಆತನ ಅಪೊಸ್ತಲರನ್ನು ಬಿಟ್ಟು ಬೇರೆ ಯಾರೂ ಇರಲಿಲ್ಲ.


ಆತನ ಮೇಲಂಗಿಯನ್ನಾದರೂ ಮುಟ್ಟಿ ಗುಣಹೊಂದಲು ಅವಕಾಶಕೊಡಬೇಕೆಂದು ಅವರು ಬೇಡಿಕೊಂಡರು. ಆತನ ಮೇಲಂಗಿಯನ್ನು ಮುಟ್ಟಿದ ಜನರೆಲ್ಲರೂ ಗುಣಹೊಂದಿದರು.


ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು